ಡಾ. ವೀರೇಂದ್ರ ಹೆಗ್ಗಡೆ ಅವರಿಗೆ ಇನ್‌ಕ್ಲೂಸಿವ್‌ ಫೈನಾನ್ಸ್‌ ಇಂಡಿಯಾ ಪ್ರಶಸ್ತಿ

ಆ್ಯಕ್ಸೆಸ್‌ ಇಂಡಿಯಾ ನೀಡುವ ಪ್ರತಿಷ್ಠಿತ ಇನ್‌ಕ್ಲೂಸಿವ್‌ ಫೈನಾನ್ಸ್‌ ಇಂಡಿಯಾ ಪ್ರಶಸ್ತಿಗೆ ಧರ್ಮಸ್ಥಳದ ಧರ್ಮಾಧಿಕಾರಿ ಡಿ.ವೀರೇಂದ್ರ ಹೆಗ್ಗಡೆ ಆಯ್ಕೆ ಆಗಿದ್ದಾರೆ.
ಡಾ. ವೀರೇಂದ್ರ ಹೆಗ್ಗಡೆ
ಡಾ. ವೀರೇಂದ್ರ ಹೆಗ್ಗಡೆ
ಧರ್ಮಸ್ಥಳ: ಆ್ಯಕ್ಸೆಸ್‌ ಇಂಡಿಯಾ ನೀಡುವ ಪ್ರತಿಷ್ಠಿತ ಇನ್‌ಕ್ಲೂಸಿವ್‌ ಫೈನಾನ್ಸ್‌ ಇಂಡಿಯಾ ಪ್ರಶಸ್ತಿಗೆ ಧರ್ಮಸ್ಥಳದ ಧರ್ಮಾಧಿಕಾರಿ ಡಿ.ವೀರೇಂದ್ರ ಹೆಗ್ಗಡೆ ಆಯ್ಕೆ ಆಗಿದ್ದಾರೆ.
ಗ್ರಾಮೀಣ ಅಭಿವೃದ್ಧಿ ಯೋಜನೆಯ ಮೂಲಕ ಆರ್ಥಿಕ ಸಬಲೀಕರಣಕ್ಕೆ ಹೆಗ್ಗಡೆ ಅವರು ನೀಡಿರುವ ಕೊಡುಗೆಗಾಗಿ ಈ ಪ್ರಶಸ್ತಿಗೆ ಆಯ್ಕೆಯಾಗಿದ್ಡಾರೆ. "ದೇಶದ ಮೈಕ್ರೋಫೈನಾನ್ಸ್‌ ವಲಯದ ಅಭಿವೃದ್ಧಿಗೆ ನೀಡಿದ ಕಾಣಿಕೆ, ಸಂಸ್ಥೆಗಳನ್ನು ಬೆಳೆಸಿದ ರೀತಿ, ಶದ ಹಣಕಾಸು ವಲಯದ ಸಮಗ್ರ ಮುನ್ನಡೆಗೆ ನಿಮ್ಮ ಕೊಡುಗೆಯನ್ನು ಪರಿಗಣಿಸಿ ನಿಮ್ಮನ್ನು ಈ ಪುರಸ್ಕಾರ ನೀಡಿ ಗೌರವಿಸಲಾಗುತ್ತಿದೆ" ಎಂದು ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕಿ ರಾಧಿಕಾ ಆಗಸ್ತೆ ತಿಳಿಸಿದ್ದಾರೆ.
ಈ ಬಾರಿ ತೀರ್ಪುಗಾರರ ವಿಶೇಷ ಪ್ರಶಸ್ತಿಯನ್ನು ವೀರೇಂದ್ರ ಹೆಗ್ಗಡೆಯವರಿಗೆ ನೀಡಲಾಗಿದೆ. ಡಿ.11ಮತ್ತು 12ರಂದು ದಿಲ್ಲಿಯ ಅಶೋಕಾ ಹೋಟೆಲ್‌ನಲ್ಲಿ ಇನ್‌ಕ್ಲೂಸಿವ್‌ ಫೈನಾನ್ಸ್‌ ಇಂಡಿಯಾದ ಸಮಾವೇಶ ನಡೆಯುತ್ತಿದೆ. ಇದರ ಮೊದಲ ದಿನ ಪ್ರಶಸ್ತಿ ಪ್ರಧಾನ ನೆರವೇರಿಸಲಾಗುತ್ತದೆ.
ಸೂಕ್ಷ್ಮ ಹಣಕಾಸು ವಲಯದಲ್ಲಿ ಅತ್ಯುನ್ನತ ಸೇವೆ ಸಲ್ಲಿಸಿದ ಮತ್ತು ಆ ವಲಯದ ಅಭಿವೃದ್ಧಿಗೆ ಮಹತ್ವದ ಕಾಣಿಕೆ ನೀಡಿದ ವ್ಯಕ್ತಿಗಳು ಮತ್ತು ಸಂಘ ಸಂಸ್ಥೆಗಳನ್ನು ಗುರುತಿಸಿ ಕಳೆದ 9 ವರ್ಷಗಳಿಂದ ಪ್ರಶಸ್ತಿ ನೀಡಲಾಗುತ್ತಿದೆ. ಹಿಂದೆ ಇದನ್ನೇ ಮೈಕ್ರೋ ಫೈನಾನ್ಸ್‌ ಪ್ರಶಸ್ತಿ ಎಂದು ಕರೆಯಲಾಗುತ್ತಿದ್ದು ಎಚ್‌ಎಸ್‌ಬಿಸಿ ಸಂಸ್ಥೆ ಈ ಪ್ರಶಸ್ತಿ ವಿತರಣೆಗೆ ಸಹಕಾರ ನೀಡುತ್ತಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com