ನಟ ದಿಗಂತ್, ಪ್ರಣಾಮ್ ಸೇರಿ 8 ಮಂದಿಗೆ ನೋಟಿಸ್

ಟಿಟಿಡಿ ಮಾಜಿ ಅಧ್ಯಕ್ಷ, ಮಾಜಿ ಸಂಸದ, ದಿವಂಗತ ಆದಿಕೇಶವುಲು ನಾಯ್ಡು ಮೊಮ್ಮಗ ಗೀತಾ ವಿಷ್ಣು ಕಾರು ಅಪಘಾತ ಪ್ರಕರಣ ಸಂಬಂಧ ವಿಚಾರಣೆಗೆ ಹಾಜರಾಗುವಂತೆ...
ದಿಗಂತ್, ಪ್ರಣವ್ ದೇವರಾಜ್
ದಿಗಂತ್, ಪ್ರಣವ್ ದೇವರಾಜ್
ಬೆಂಗಳೂರು: ಟಿಟಿಡಿ ಮಾಜಿ ಅಧ್ಯಕ್ಷ, ಮಾಜಿ ಸಂಸದ, ದಿವಂಗತ ಆದಿಕೇಶವುಲು ನಾಯ್ಡು ಮೊಮ್ಮಗ ಗೀತಾ ವಿಷ್ಣು ಕಾರು ಅಪಘಾತ ಪ್ರಕರಣ ಸಂಬಂಧ ವಿಚಾರಣೆಗೆ ಹಾಜರಾಗುವಂತೆ ನಟ ಪ್ರಜ್ವಲ್, ದಿಗಂತ್ ಸೇರಿದಂತೆ 8 ಮಂದಿಗೆ ಜಯನಗರ ಪೊಲೀಸರು ನೋಟಿಸ್ ನೀಡಿದ್ದಾರೆ. 
ಕಳೆದ ವಾರ ನಗರದ ಸೌತ್ ಎಂಡ್ ಸರ್ಕಲ್ ನಲ್ಲಿ ಕಾರು ಅಪಘಾತವಾಗಿತ್ತು. ಈ ವೇಳೆ ಸಿಕ್ಕಿಬಿದ್ದಿ ಆರೋಪಿ ವಿಷ್ಟು ಜತೆ ನಟರಾದ ದಿಗಂತ್ ಮತ್ತು ಪ್ರಜ್ವಲ್ ಹೆಸರು ಕೇಳಿಬಂದಿತ್ತು. ಈ ಹಿನ್ನೆಲೆಯಲ್ಲಿ ದಿಗಂತ್, ಪ್ರಜ್ವಲ್, ಪ್ರಣಾಮ್ ದೇವರಾಜ್ ಮತ್ತು ಫಜಲ್ ಎಂಬುವರಿಗೆ ಜಯನಗರ ಪೊಲೀಸರು ನೋಟಿಸ್ ನೀಡಿದ್ದು ಮೂರು ದಿನದೊಳಗೆ ವಿಚಾರಣೆಗೆ ಹಾಜರಾಗುವಂತೆ ಸೂಚಿಸಿದ್ದಾರೆ. 
ನೋಟಿಸ್ ಬಗ್ಗೆ ಪ್ರತಿಕ್ರಿಯೆ ನೀಡಿರುವ ನಟ ದೇವರಾಜ್ ಅವರು ನನ್ನ ಹಿರಿಯ ಮಗ ಪ್ರಜ್ವಲ್ ಅವರಿಗೆ ನೋಟಿಸ್ ಬಂದಿಲ್ಲ. ಕಿರಿಯ ಮಗ ಪ್ರಣಾಮ್ ದೇವರಾಜ್ ಅವರಿಗೆ ನೋಟಿಸ್ ಬಂದಿದೆ. ಈ ಬಗ್ಗೆ ಪ್ರಣಾಮ್ ದೇವರಾಜ್ ಠಾಣೆಗೆ ಹೋಗಿ ಸ್ಪಷ್ಟನೆ ನೀಡಿದ್ದಾರೆ ಎಂದು ಹೇಳಿದ್ದಾರೆ. 
ಈ ಬಗ್ಗೆ ಮಾಧ್ಯಮವೊಂದಕ್ಕೆ ಪ್ರತಿಕ್ರಿಯಿಸಿರುವ ನಟ ದಿಗಂತ್ ಸದ್ಯ ನನಗೆ ಯಾವುದೇ ನೋಟಿಸ್ ಬಂದಿಲ್ಲ. ನೋಟಿಸ್ ಬಂದರೇ ನಾನು ಪೊಲೀಸರ ಮುಂದೆ ವಿಚಾರಣೆಗೆ ಹಾಜರಾಗುತ್ತೇನೆ ಎಂದು ಹೇಳಿದರು. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com