ಇದೇ ವೇಳೆ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ ರಾಮಲಿಂಗಾ ರೆಡ್ಡಿ ಅವರು, ಬಿಜೆಪಿ ಮುಖಂಡರಿಗೆ ವಾರಕ್ಕೊಂದು ಹೇಳಿಕೆ ನೀಡಬೇಕು ಎಂದು ವರಿಷ್ಠರು ಸೂಚಿಸಿದ್ದಾರೆ. ಹೀಗಾಗಿ ಏನೂ ವಿಷಯಗಳು ಇಲ್ಲದಿದ್ದಾಗ ವಾರಕ್ಕೊಂದು ಪತ್ರಿಕಾಗೋಷ್ಠಿ ಕರೆದು ಸುಮ್ಮನೆ ಕಾಂಗ್ರೆಸ್ ಅಥವಾ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಮೇಲೆ ಹೇಳಿಕೆ ಕೊಡುವುದೇ ಕೆಲವರಿಗೆ ಒಂದು ಚಟವಾಗಿದೆ. ಅಮಿತ್ ಷಾ, ಪ್ರಧಾನಿ ಮೋದಿ ಅವರು ಒಂದಲ್ಲ ಹತ್ತು ಬಾರಿ ರಾಜ್ಯಕ್ಕೆ ಬಂದು ಹೋಗಲಿ. ಇಲ್ಲಿ ಗೆಲ್ಲುವುದೇ ಕಾಂಗ್ರೆಸ್. ಮುಂದಿನ ಚುನಾವಣೆಯಲ್ಲಿ ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರುತ್ತದೆ ಎಂದರು.