ಮೈಸೂರು: ಸಿಡಿಲು ಬಡಿದು ಒಂದೇ ಕಡೆ 7 ಮಂದಿ ಸಾವು

ಸಿಡಿಲು ಬಡಿದು ಒಂದೇ ಕಡೆ ನಿಂತಿದ್ದ 7 ಮಂದಿ ದಾರುಣವಾಗಿ ಸಾವನ್ನಪ್ಪಿರುವ ಭೀಕರ ಘಟನೆ ಗುರುವಾರ ಮೈಸೂರು ಜಿಲ್ಲೆಯ ....
ಗಾಯಾಳುಗಳನ್ನು ಪಿರಿಯಾಪಟ್ಟಣ ಸರ್ಕಾರಿ ಆಸ್ಪತ್ರೆಗೆ ದಾಖಲಿಸುತ್ತಿರುವುದು
ಗಾಯಾಳುಗಳನ್ನು ಪಿರಿಯಾಪಟ್ಟಣ ಸರ್ಕಾರಿ ಆಸ್ಪತ್ರೆಗೆ ದಾಖಲಿಸುತ್ತಿರುವುದು
ಮೈಸೂರು: ಸಿಡಿಲು ಬಡಿದು ಒಂದೇ ಕಡೆ ನಿಂತಿದ್ದ 7 ಮಂದಿ ದಾರುಣವಾಗಿ ಸಾವನ್ನಪ್ಪಿರುವ ಭೀಕರ ಘಟನೆ ಗುರುವಾರ ಮೈಸೂರು ಜಿಲ್ಲೆಯ ಪಿರಿಯಾಪಟ್ಟಣ ತಾಲ್ಲೂಕಿನ ನಂದಿನಾಥಪುರದಲ್ಲಿ ನಡೆದಿದೆ.
ಇಂದು ಮಧ್ಯಾಹ್ನ ಸುರಿದ ಭಾರಿ ಮಳೆಯಿಂದ ರಕ್ಷಣೆ ಪಡೆಯುವುದಕ್ಕಾಗಿ ಎಂಟು ಮಂದಿ ದೇವಸ್ಥಾನವೊಂದರ ಬಳಿ ನಿಂತಿದ್ದ ವೇಳೆ ಸಿಡಿಲು ಬಡಿದಿದೆ. ಸಿಡಿಲಿನಾಘಾತಕ್ಕೆ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿದರೆ ಮೂವರು ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ಸ್ಪಂದಿಸದೆ ಸಾವನ್ನಪ್ಪಿದ್ದಾರೆ. ಮತ್ತೊಬ್ಬ ವ್ಯಕ್ತಿ ಗಂಭೀರವಾಗಿ ಗಾಯಗೊಂಡಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ.
ಮೃತರು ಪಿರಿಯಾಪಟ್ಟಣ ತಾಲ್ಲೂಕಿನ ಹುಣಸೆವಾಡಿ ಗ್ರಾಮದ ನಿವಾಸಿಗಳಾಗಿದ್ದು, ಹೊಲದಲ್ಲಿ ಕೆಲಸ ಮಾಡುತ್ತಿದ್ದಾಗ ಮಳೆಯಿಂದ ರಕ್ಷಣೆ ಪಡೆಯಲು ದೇವಸ್ಥಾನದ ಬಳಿ ಹೋಗಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.
ಸುಜಯ್‌ (15) ಸುವರ್ಣಮ್ಮ (45) ಪುಟ್ಟಣ್ಣ(60)  ಸುದೀಪ್‌, ತಿಮ್ಮೇಗೌಡ, ಉಮೇಶ್‌, ಪ್ರವೀಣ್‌ ಮೃತ ದುರ್ದೈವಿಗಳು.
ಈ ಸಂಬಂಧ ಪಿರಿಯಾಪಟ್ಟಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com