ರಾಜ್ಯದಲ್ಲಿ ಸುಮಾರು 45 ಲಕ್ಷ ಮಂದಿ ವಿಶ್ವಕರ್ಮ ಸಮುದಾಯದ ಜನವಿದ್ದಾರೆ, ನೀವು ಸಾಮಾಜಿಕ ನ್ಯಾಯಕ್ಕಾಗಿ ಭಿಕ್ಷೆ ಬೇಡುವ ಅಗತ್ಯವಿಲ್ಲ, ಅದು ನಿಮ್ಮ ಹಕ್ಕು ಎಂದು ಅಭಿಪ್ರಾಯ ಪಟ್ಟರು, ಕರ್ನಾಟಕದಲ್ಲಿ ಹಿಂದುಳಿದ ವರ್ಗಗಳಿಗೆ ಕೇವಲ ಶೇ,30 ರಷ್ಟು ಮೀಸಲಾತಿ ನೀಡಲಾಗುತ್ತಿದೆ. ಹಿಂದುಳಿದ ವರ್ಗಗಳ ಮೀಸಲಾತಿ ಸೌಲಭ್ಯವನ್ನೂ ಕೆಲವೇ ಜಾತಿಗಳು ಅನುಭವಿಸುತ್ತಿವೆ. ತೀರಾ ಹಿಂದುಳಿದವರಿಗೆ ಈ ಸವಲತ್ತು ಸಿಗಬೇಕಾದರೆ ಒಳಮೀಸಲಾತಿ ಜಾರಿ ಆಗಬೇಕು. ಈ ಸಲುವಾಗಿ ಪ್ರಧಾನಿ ಸಮಿತಿಯೊಂದನ್ನು ರಚಿಸಿದ್ದಾರೆ’ ಎಂದರು.