ಹಕ್ಕಿಪಿಕ್ಕಿ ಬುಡಕಟ್ಟು ಜನರ ಬಂಧನದ ಸುದ್ದಿ ತಿಳಿಯುತ್ತಿದ್ದಂತೆಯೇ ತಕ್ಷಣ ಕಾರ್ಯಪ್ರವೃತ್ತರಾದ ಗೃಹ ಸಚಿವ ರಾಮಲಿಂಗಾರೆಡ್ಡಿ, ಅಗತ್ಯ ಕ್ರಮ ಜರುಗಿಸಲು ಪ್ರಧಾನ ಕಾರ್ಯದರ್ಶಿ ಸುಭಾಷ್ಚಂದ್ರ, ಪೊಲೀಸ್ ಮಹಾನಿರ್ದೇಶಕ ಆರ್.ಕೆ.ದತ್ತಾ ಅವರಿಗೆ ಸೂಚನೆ ನೀಡಿದ್ದರು. ಈ ಇಬ್ಬರು ಅಧಿಕಾರಿಗಳು ಕೇಂದ್ರ ಸರ್ಕಾರವನ್ನು ಸಂಪರ್ಕಿಸಿದ್ದಲ್ಲದೆ ರಾಯಭಾರ ಕಚೇರಿ ಜತೆಗೂ ಸಂಪರ್ಕ ಸಾಧಿಸಿದ್ದರು. ಈ ಪ್ರಯತ್ನಗಳ ಹಿನ್ನೆಲೆಯಲ್ಲಿ ಇದೀಗ 11 ಮಂದಿ ಬಂಧಿತರ ಬಿಡುಗಡೆಯಾಗಿದೆ.