ಐಎಎಸ್ ಅಧಿಕಾರಿಗೆ ನಿಂದನೆ ಹಾಗೂ ಬೆದರಿಕೆ ಸಂಬಂಧ ಪ್ರತಿಕ್ರಿಯೆ ನೀಡಿರುವ ಶಾಸಕ ಶಿವಮೂರ್ತಿ ನಾಯಕ್, ನಾನು ಅಧಿಕಾರಿ ವಿರುದ್ಧ ಯಾವುದೇ ಅಸಂಬದ್ಧ ಪದ ಬಳಕೆ ಮಾಡಿಲ್ಲ, ನಾನು ದಲಿತ ಎಂಬ ಕಾರಣಕ್ಕೆ ನನ್ನ ಪರವಾನಗಿ ಅರ್ಜಿಯನ್ನು ನಿರಾಕರಿಸಲಾಗಿದೆ, ನಾನು ನ್ಯಾಯ ಕೇಳು ಹೋಗಿದ್ದೆ. ಗಣಿ ಚಟುವಟಿಕೆಗಳಲ್ಲಿ ಯಾವುದೇ ದಲಿತರು ಭಾಗಿಯಾಗಿಲ್ಲ, ಎಸ್ ಸ್ಸಿ ಎಸ್ ಎಸ್ಟಿ ಕಲ್ಯಾಣ ಕಾಯಿದೆ ಅನುಗುಣವಾಗಿ ನಾನು ನನ್ನ ಹಕ್ಕನ್ನು ಕೇಳಿದ್ದೇನೆ ಎಂದು ಹೇಳಿದ್ದಾರೆ.