ಇದೇ ಮೊದಲ ಬಾರಿಗೆ ಜಿಲ್ಲಾಡಳಿತ ಜನರಲ್ ಪಾಸ್, ನೀಡುವುದನ್ನು ನಿಲ್ಲಿಸಿದೆ. ಸ್ಥಳೀಯ ರಾಜಕಾರಣಿಗಳು ಹಾಗೂ ಸಂಸದರು ಮತ್ತವರ ಕುಟುಂಬಸ್ಥರಿಗೆ ಮಾತ್ರ ವಿಐಪಿ ಪಾಸ್ ನೀಡಲಾಗುತ್ತಿದೆ. ಜೊತೆಗೆ ಭಕ್ತರಿಗೆ ಲಡ್ಡು ಪ್ರಸಾದ ವಿತರಿಸುವುದನ್ನು ನಿಲ್ಲಿಸಿದೆ, ಮುಜರಾಯಿ ಇಲಾಖೆ ಪುಳಿಯೊಗರೆ, ಪೊಂಗಲ್, ರೈಸ್ ಬಾತ್, ಪಾಯಸ ಸೇರಿದಂತೆ 5 ಬಗೆಯ ಪ್ರಸಾದವನ್ನು ಚನ್ನಕೇಶವ ದೇವಾಲಯದಲ್ಲಿ ನೀಡಲಿದೆ.