ಹಿರಿಯ ಪತ್ರಕರ್ತ ಸಾಯಿನಾಥ್
ಹಿರಿಯ ಪತ್ರಕರ್ತ ಸಾಯಿನಾಥ್

ಖ್ಯಾತ ಪತ್ರಕರ್ತ ಪಿ. ಸಾಯಿನಾಥ್ ಗೆ 2016 ನೇ ಸಾಲಿನ ಬಸವಶ್ರೀ ಪ್ರಶಸ್ತಿ

ಹಿರಿಯ ಪತ್ರಕರ್ತ ಪಿ.ಸಾಯಿನಾಥ್ 2016 ನೇ ಸಾಲಿನ ಬಸವಶ್ರೀ ಪ್ರಶಸ್ತಿ ಗೆ ಆಯ್ಕೆ ಆಗಿದ್ದಾರೆ.
Published on
ಚಿತ್ರದುರ್ಗ: ಹಿರಿಯ ಪತ್ರಕರ್ತ ಪಿ.ಸಾಯಿನಾಥ್  2016 ನೇ ಸಾಲಿನ ಬಸವಶ್ರೀ ಪ್ರಶಸ್ತಿ ಗೆ ಆಯ್ಕೆ ಆಗಿದ್ದಾರೆ. 
ಚಿತ್ರದುರ್ಗದ ಮುರುಘಾಮಠ ದಿಂದ‌ ಕೊಡಮಾಡುವ ಈ ಪ್ರಶಸ್ತಿಗೆ ರಾಮನ್ ಮ್ಯಾಗ್ಸೆಸೆ ಪ್ರಶಸ್ತಿ ವಿಜೇತ ಪಿ. ಸಾಯಿನಾಥ್ ಆಯ್ಕೆ ಆಗಿದ್ದಾರೆ ಎಂದು ಶಿವಮೂರ್ತಿ ಮುರುಘಾಶರಣರು ಪ್ರಕಟಿಸಿದರು. ಪತ್ರಿಕೋದ್ಯಮ ಕ್ಷೇತ್ರಕ್ಕೆ ಸಾಯಿನಾಥ್ ನೀಡಿರುವ ಕೊದುಗೆಯನ್ನು ಪರಿಗಣಿಸಿ ಈ ಪ್ರಶಸ್ತಿ ನೀಡಲಾಗುತ್ತಿದೆ.
ಬಸವಶ್ರೀ ಪ್ರಶಸ್ತಿ ಯು ರೂ. 5 ಲಕ್ಷ ನಗದು, ಪ್ರಮಾಣಪತ್ರ ಮತ್ತು ಪ್ರಶಸ್ತಿ ಫಲಕವನ್ನು ಒಳಗೊಂಡಿದೆ. ಅ.23 ರಂದು ಮಠದ ಆವರಣದಲ್ಲಿರುವ ಅನುಭವ ಮಂಟಪದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುತ್ತದೆ. 
12 ನೆಯ ಶತಮಾನದ ಸಾಮಾಜಿಕ ಸುಧಾರಕ ಬಸವೇಶ್ವರನ ತತ್ವಗಳನ್ನು ಅನುಸರಿಸಿ ಸಮಾಜಕ್ಕೆ ತಮ್ಮ ವಿಶೇಷ ಕೊಡುಗೆ ನೀಡಿದವರನ್ನು ಗುರುತಿಸಿ ಈ ಪ್ರಶಸ್ತಿ ನೀದಲಾಗುತ್ತದೆ ಎಂದು ಸ್ವಾಮೀಜಿ ಹೇಳಿದರು.
'ಪೀಪಲ್ಸ್ ಆರ್ಚಿವ್ ಆಫ್ ರೂರಲ್ ಇಂಡಿಯಾ' ದ ಸಂಸ್ಥಾಪಕ ಸಂಪಾದಕರಾಗಿರುವ ಸಾಯಿನಾಥ್ 'ದಿ ಹಿಂದೂ' ಪತ್ರಿಕೆಯ ಗ್ರಾಮೀಣ ವ್ಯವಹಾರಗಳ ವಿಭಾಗದ ಸಂಪಾದಕರಾಗಿಯೂ ಕಾರ್ಯ ನಿರ್ವಹಿಸಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

X

Advertisement

X
Kannada Prabha
www.kannadaprabha.com