ಮುಖ್ಯಮಂತ್ರಿ ಸಿದ್ದರಾಮಯ್ಯ ತಮ್ಮ ಸಂಪುಟದ ಹಿರಿಯ ಸಚಿವರುಗಳಾದ ಡಿ.ಕೆ.ಶಿವಕುಮಾರ್, ರಾಮಲಿಂಗಾ ರೆಡ್ಡಿ, ಕೆ,ಜೆ.ಜಾರ್ಜ್ ಅವರೊಂದಿಗೆ ಕುರುಬರಹಳ್ಳಿಗೆ ಭೇಟಿ ನೀಡಿದ್ದಾರೆ. ಇಲ್ಲಿ ನಿನ್ನೆ ಮಳೆಗೆ ಮೂವರು ಮೃತಪಟ್ಟಿದ್ದಾರೆ, ನಿನ್ನೆ ಸಂಜೆ ಮತ್ತಿಬ್ಬರು ಕೊಚ್ಚಿ ಹೋಗಿರಬಹುದು ಎಂದು ಸಂದೇಹ ವ್ಯಕ್ತಪಡಿಸಲಾಗಿದೆ.
ಇಂದು ಕುರುಬರಹಳ್ಳಿಗೆ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ, ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಕೇಂದ್ರ ಸಚಿವ ಡಿ.ವಿ.ಸದಾನಂದ ಗೌಡ ಮತ್ತು ಇತರ ಬಿಜೆಪಿ ನಾಯಕರಿದ್ದರು.