ಶನಿವಾರ ಬೆಳಗ್ಗೆ ರಾಜ್ಯದ ಮುಖಂಡರಿಗೆ ರಾಹುಲ್ ಗಾಂಧಿ ಈ ಬಗ್ಗೆ ಮಾಹಿತಿ ನೀಡಿದ್ದು, ಮಳೆ ಅವಾಂತರ ಮತ್ತು ರಸ್ತೆಗುಂಡಿಗಳಿಂದ ಸಂಭವಿಸಿದ ಸಾವುಗಳ ಕುರಿತಂತೆ ವರದಿ ಮತ್ತು ಸರ್ಕಾರ ಕೈಗೊಂಡ ಕ್ರಮಗಳ ಕುರಿತು ವರದಿ ನೀಡುವಂತೆ ಕೇಳಿದ್ದಾರೆ ಎಂದು ತಿಳಿದುಬಂದಿದೆ. ಈ ಬಗ್ಗೆ ಮಾಧ್ಯಮಗಳಿಗೆ ಮಾಹಿತಿ ನೀಡಿರುವ ರಾಜ್ಯ ಕಾಂಗ್ರೆಸ್ ಉಸ್ತುವಾರಿ ಕೆಸಿ ವೇಣುಗೋಪಾಲ್ ಅವರು, ಮಳೆ ಅವಾಂತರ ಕುರಿತಂತೆ ಸಿಎಂ ಸಿದ್ದರಾಮಯ್ಯರಿಂದ ವರದಿ ನೀಡುವಂತೆ ಕೇಳಲಾಗಿದೆ ಎಂದು ಸ್ಪಷ್ಟಪಡಿಸಿದ್ದಾರೆ.