ಮಳೆಯ ಪ್ರಮಾಣ ಇನ್ನೂ ಹೆಚ್ಚಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ವರದಿ ಹೇಳಿದೆ. ಬೆಂಗಳೂರು ವಿಚಿತ್ರ ಹವಾಮಾನವನ್ನು ಎದುರಿಸುತ್ತಿದ್ದು, ನೈಋತ್ಯ ಮುಂಗಾರಿನ ಕಾಲಮಾನ ಹೆಚ್ಚಿದ್ದು, ಈಶಾನ್ಯ ಮುಂಗಾರು ಇದೇ ವೇಳೆ ಪ್ರಾರಂಭವಾಗಲಿದೆ. ಅರಬ್ಬೀ ಸಮುದ್ರದಲ್ಲಿ ಉಂಟಾಗಿರುವ ವಾಯುಭಾರ ಕುಸಿತ ಉಂಟಾಗಿರುವುದರಿಂದ ಬೆಂಗಳೂರು ಸೇರಿದಂತೆ ಕರ್ನಾಟಕದ ಇತರ ಪ್ರದೇಶಗಳಲ್ಲಿ ಹೆಚ್ಚು ಪ್ರಮಾಣದಲ್ಲಿ ಮಳೆಯಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.