ಬೆಂಗಳೂರು ಮಳೆಗೆ ಮತ್ತೊಂದು ಬಲಿ: ಚರಂಡಿಯಲ್ಲಿ ಕೊಚ್ಚಿಹೋದ 16 ವರ್ಷದ ಬಾಲಕಿ

ಬೆಂಗಳೂರು ಮಹಾಮಳೆಗೆ ಮತ್ತೊಂದು ಜೀವ ಬಲಿಯಾಗಿದ್ದು, ಸಿವಿ ರಾಮನ್ ನಗರದ ಬಾಗ್ಮನೆ ಟೆಕ್ ಪಾರ್ಕ್ ಹಿಂಭಾಗದಲ್ಲಿರುವ ಒಳಚರಂಡಿಯಲ್ಲಿ 16 ವರ್ಷದ ಬಾಲಕಿ ನರಸಮ್ಮ ಕೊಚ್ಚಿಹೋಗಿದ್ದಾಳೆ.
ಬೆಂಗಳೂರು ಮಳೆಗೆ ಮತ್ತೊಂದು ಬಲಿ: ಒಳಚರಂಡಿಯಲ್ಲಿ ಕೊಚ್ಚಿಹೋದ 16 ವರ್ಷದ ಬಾಲಕಿ
ಬೆಂಗಳೂರು ಮಳೆಗೆ ಮತ್ತೊಂದು ಬಲಿ: ಒಳಚರಂಡಿಯಲ್ಲಿ ಕೊಚ್ಚಿಹೋದ 16 ವರ್ಷದ ಬಾಲಕಿ
Updated on
ಬೆಂಗಳೂರು: ಬೆಂಗಳೂರು ಮಹಾಮಳೆಗೆ ಮತ್ತೊಂದು ಜೀವ ಬಲಿಯಾಗಿದ್ದು, ಸಿವಿ ರಾಮನ್ ನಗರದ ಬಾಗ್ಮನೆ ಟೆಕ್ ಪಾರ್ಕ್ ಹಿಂಭಾಗದಲ್ಲಿರುವ ಚರಂಡಿಯಲ್ಲಿ 16 ವರ್ಷದ ಬಾಲಕಿ ನರಸಮ್ಮ ಕೊಚ್ಚಿಹೋಗಿದ್ದಾಳೆ. 
ಭಾನುವಾರ ಬೆಳಿಗ್ಗೆ ಯುವತಿ ಚರಂಡಿಯ ಬಳಿ ಬಹಿರ್ದೆಸೆಗೆ ತೆರಳಿದ್ದಾಗ ಈ ಘಟನೆ ನಡೆದಿದ್ದು, ಸ್ಥಳೀಯರು ಬಾಲಕಿಯನ್ನು ರಕ್ಷಿಸಲು ಯತ್ನಿಸಿದರಾದರೂ ಸಹ ರಕ್ಷಣೆ ಯಶಸ್ವಿಯಾಗಲಿಲ್ಲ, ಗಂಟೆಗಳ ನಂತರ ಆಕೆಯ ಮೃತದೇಹ ಘಟನಾ ಸ್ಥಳದಿಂದ 400 ಮೀಟರ್ ದೂರದಲ್ಲಿ ಪತ್ತೆಯಾಗಿದೆ. ಸ್ಥಳೀಯರಿಗೆ ಮೃತದೇಹ ಪತ್ತೆಯಾಗಿರುವುದರಿಂದ ತುರ್ತು ಪರಿಸ್ಥಿತಿ ನಿರ್ವಹಣೆ ಮಾಡುವ ಸಿಬ್ಬಂದಿಗಳಿಗೆ ಮಾಹಿತಿ ನೀಡಿರಲಿಲ್ಲ ಎಂದು ಬೈಯ್ಯಪ್ಪನಹಳ್ಳಿ ಪೊಲೀಸರು ತಿಳಿಸಿದ್ದಾರೆ. 
ಚರಂಡಿ ಬಳಿ ಬೇಲಿ ಹಾಕದಿದ್ದಕ್ಕೆ ಮೃತ ಯುವತಿಯ ಕುಟುಂಬ ಸದಸ್ಯರು ಅಸಮಾಧಾನ ವ್ಯಕ್ತಪಡಿಸಿದ್ದು ಬಿಬಿಎಂಪಿ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಲು ಆಗ್ರಹಿಸಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com