ಕೆಎಸ್ ಒಯು ಉದ್ಯೋಗಿಗಳಿಂದ ಮನವಿ ಸ್ವೀಕರಿಸಿ ಮಾತನಾಡಿದ ಸಿದ್ದರಾಮಯ್ಯ, ಮಾನ್ಯತೆ ರದ್ದುಪಡಿಸಿರುವುದು ಯುಜಿಸಿ. ಅದು ಕೇಂದ್ರ ಸರ್ಕಾರದ ಅಧೀನದಲ್ಲಿದೆ. ಮಾನವ ಸಂಪನ್ಮೂಲ ಅಭಿವೃದ್ಧಿ ಸಚಿವ ಪ್ರಕಾಶ್ ಜಾವಡೇಕರ್ ಅವರಿಗೆ ಮಾನ್ಯತೆ ದೊರಕಿಸಿಕೊಡುವಂತೆ ಪತ್ರ ಬರೆದಿದ್ದೇನೆ. ಕೆಎಸ್ಒಯುವಿನಲ್ಲಿ ಸಾಕಷ್ಟು ಸಿಬ್ಬಂದಿ ಇದ್ದಾರೆ. ಅವರಿಗೆ ತೊಂದರೆ ಆಗಬಾರದು, ವಿದ್ಯಾರ್ಥಿಗಳ ಹಿತ ಕಾಯಬೇಕು ಎಂದು ಕೋರಿದ್ದೇನೆ. ಯಾರು ತಪ್ಪು ಮಾಡಿದ್ದಾರೊ ಅವರ ಮೇಲೆ ಕ್ರಮ ತೆಗೆದುಕೊಳ್ಳೋಣ ಎಂದೂ ಹೇಳಿದ್ದೇನೆ ಎಂದು ತಿಳಿಸಿದರು.