ಭಾರತದ ಗ್ರಾಮೀಣ ಪ್ರದೇಶದಲ್ಲಿ ಲಕ್ಷಾಂತರ ಬಡ ಕರಕುಶಲ ಕರ್ಮಿಗಳು ವಿವಿಧ ರೀತಿಯ ವಸ್ತುಗಳನ್ನು ಉತ್ಪಾದಿಸುತ್ತಾರೆ. ಅದರ ಮೇಲೆ ಜಿಎಸ್ ಟಿ ತೆರಿಗೆ ವಿಧಿಸಿದರೆ ಲಕ್ಷಾಂತರ ಕರಕುಶಲ ಕರ್ಮಿಗಳ ಜೀವನದ ಮೇಲೆ ಅಡ್ಡ ಪರಿಣಾಮ ಬೀರಲಿದೆ. ಹೀಗಾಗಿ ಜಿಎಸ್ ಟಿ ಮಂಡಳಿ ಈ ವಿಷಯವನ್ನು ಗಂಭೀರವಾಗಿ ಪರಿಗಣಿಸಬೇಕು ಎಂದು ಸಿಎಂ ತಮ್ಮ ಪತ್ರದಲ್ಲಿ ತಿಳಿಸಿದ್ದಾರೆ.