ರಾಮನಗರ: ಚಾಲಕನ ನಿಯಂತ್ರಣ ತಪ್ಪಿ ಕೆರೆಗೆ ಉರುಳಿದ ಕಾರು, ಮೂವರ ಸಾವು

ರಾಮನಗರ ತಾಲ್ಲೂಕಿನ ಬಿಡದಿ ಪೊಲೀಸ್ ಠಾಣೆ ವ್ಯಾಪ್ತಿಯ ಮನಗನಹಳ್ಳಿ ಗ್ರಾಮದ ರಸ್ತೆ ತಿರುವಿನಲ್ಲಿ ಚಾಲಕನ ನಿಯಂತ್ರಣ ....
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
Updated on
ರಾಮನಗರ: ರಾಮನಗರ ತಾಲ್ಲೂಕಿನ ಬಿಡದಿ ಪೊಲೀಸ್ ಠಾಣೆ ವ್ಯಾಪ್ತಿಯ ಮನಗಾನಹಳ್ಳಿ ಗ್ರಾಮದ ರಸ್ತೆ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿದ ಕಾರು ಕೆರೆಗೆ ಬಿದ್ದು ಚಾಲಕ, ಇಬ್ಬರು ಮಕ್ಕಳು ಸೇರಿದಂತೆ ಮೂವರು ಮೃತಪಟ್ಟಿರುವ ಘಟನೆ ನಿನ್ನೆ ಸಂಜೆ ನಡೆದಿದೆ.
ಮೃತರು ಕನಕಪುರ ತಾಲ್ಲೂಕಿನ ಗೊಟ್ಟಿಗೆಹಳ್ಳಿ ಗ್ರಾಮದವರು. ಚಾಲಕ ಚಿದಾನಂದ್ ಆತನ ಅಕ್ಕನ ಮಕ್ಕಳಾದ ಇಂಪನಾ ಮತ್ತು ಶಶಾಂಕ್ ಮೃತಪಟ್ಟಿದ್ದು, ಹೈಸ್ಕೂಲ್ ವಿದ್ಯಾರ್ಥಿ ದಿಲೀಪ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ದೀಪಾವಳಿ ಹಬ್ಬಕ್ಕೆಂದು ಸಂಬಂಧಿಕರ ಮನೆಗೆ ಇವರು ಹೊರಟಿದ್ದರು. 
ಅಪಘಾತದಲ್ಲಿ ನೀರಿನಲ್ಲಿ ಮುಳುಗುತ್ತಿದ್ದ ಕಾರನ್ನು ಗಮನಿಸಿದ ಗ್ರಾಮಸ್ಥರು ಕಾರಿನಲ್ಲಿದ್ದವರನ್ನು ಬೇರೆ ವಾಹನಗಳಲ್ಲಿ ರಾಜರಾಜೇಶ್ವರಿ ಆಸ್ಪತ್ರೆಗೆ ಕರೆದುಕೊಂಡು ಹೋಗುವ ಮಾರ್ಗ ಮಧ್ಯದಲ್ಲಿ ಮೃತಪಟ್ಟರು ಎಂದು ತಿಳಿದು ಬಂದಿದೆ.
ಬಿಡದಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com