ಕರ್ನಾಟಕದ ಚಾಮರಾಜ ನಗರ ಜಿಲ್ಲೆಯ ಕೊಳ್ಳೇಗಾಲ ತಾಲೂಕಿನ ಮಲೆ ಮಹದೇಶ್ವರ ದೇಗುಲದಲ್ಲಿ ಮಹಾ ರಥೋತ್ಸವವು ದೀಪಾವಳಿ ಹಬ್ಬದ ಅಂಗವಾಗಿ ಮೂರು ದಿನಗಳ ಕಾಲ ನಡೆಯುತ್ತಿದ್ದು, ಜಾತ್ರೆಯ ಮೊದಲನೇ ದಿನ ಮಹದೇಶ್ವರನಿಗೆ ಎಣ್ಣೆ ಮಜ್ಜನ ನಡೆದರೆ, ಎರಡನೇ ದಿನ ಹಾಲರವಿ ಉತ್ಸವ ನಡೆಯಿತು. ಇಂದು ಜಾತ್ರೆಯ ಮೂರನೇ ಮತ್ತು ಅಂತಿಮ ದಿನವಾಗಿದ್ದು, ಇಂದು ಮಹೇದೇಶ್ವರ ಸ್ವಾಮಿಯ ಮಹಾರಥೋತ್ಸವ ನಡೆಯಿತು.