ಕೆಪಿಸಿಎಲ್ ಮತ್ತು ಕೆಎಂಸಿಎಲ್ ನಡುವೆ ಒಪ್ಪಂದ ಹಲವು ಅನುಮಾನಗಳು ಬರುವಂತೆ ಮಾಡಿದೆ. ಇದೊಂದು ಸದ್ದುದ್ದೇಶದ ಒಪ್ಪಂದ ಆಗಿಲ್ಲ ಅನ್ನೋದು ಮೇಲ್ನೋಟಕ್ಕೆ ಕಾಣಿಸುತ್ತದೆ. ಕೆಪಿಸಿಎಲ್ ಸಹಭಾಗಿತ್ವದಲ್ಲಿ 2003ರ ಫೆಬ್ರವರಿಯಲ್ಲಿ ಜಂಟಿ ಕಂಪನಿ ಸ್ಥಾಪನೆಯಾಗಿದ್ದು, ಕೆಪಿಸಿಎಲ್ ಜವಾಬ್ದಾರಿ ಶೇಖಡ 24ರಷ್ಟು ಮಾತ್ರ ಇತ್ತು. ಇದಕ್ಕೆ ಸುಪ್ರೀಂಕೋರ್ಟ್ ಸಹ ದಂಡ ಹಾಕಿತ್ತು. ಮನೋಹರ್ ಲಾಲ್ ಶರ್ಮಾ ಕೇಸ್ ನಲ್ಲಿ ಹಲವು ಕಲ್ಲಿದ್ದಲು ಹಂಚಿಕೆಯನ್ನು ಸುಪ್ರೀಂಕೋರ್ಟ್ ರದ್ದು ಮಾಡಿತ್ತು. ಕೆಪಿಸಿಎಲ್ ಲೈಸೆನ್ಸ್ ಸಹ ರದ್ದಾಗಿತ್ತು ಎಂದು ಬಿಎಸ್ವೈ ಹೇಳಿದ್ದಾರೆ.