ಗದಗ: ಕೆ ಎಸ್ ಆರ್ ಟಿಸಿ ಬಸ್ ಅಪಘಾತದಲ್ಲಿ ಮಹಿಳೆ ಸಾವು, 8 ಮಂದಿಗೆ ಗಾಯ

ಸರ್ಕಾರಿ ಬಸ್ ಅಪಘಾತಕ್ಕೀಡಾಗಿ ಓರ್ವ ಮಹಿಳೆ ಸ್ಥಳದಲ್ಲಿಯೇ ಮೃತಪಟ್ಟು, 8 ಮಂದಿ ಗಂಭೀರವಾಗಿ ಗಾಯಗೊಂಡಿರುವ ಘಟನೆ ಗದಗ ಜಿಲ್ಲೆ ಗಜೇಂದ್ರಗಡ ಸಮೀಪ ನಡೆದಿದೆ.
ಗದಗ: ಕೆ ಎಸ್ ಆರ್ ಟಿಸಿ ಬಸ್ ಅಪಘಾತದಲ್ಲಿ ಮಹಿಳೆ ಸಾವು, 8 ಮಂದಿಗೆ ಗಾಯ
ಗದಗ: ಕೆ ಎಸ್ ಆರ್ ಟಿಸಿ ಬಸ್ ಅಪಘಾತದಲ್ಲಿ ಮಹಿಳೆ ಸಾವು, 8 ಮಂದಿಗೆ ಗಾಯ
ಗದಗ: ಸರ್ಕಾರಿ ಬಸ್ ಅಪಘಾತಕ್ಕೀಡಾಗಿ ಓರ್ವ ಮಹಿಳೆ ಸ್ಥಳದಲ್ಲಿಯೇ ಮೃತಪಟ್ಟು, 8 ಮಂದಿ ಗಂಭೀರವಾಗಿ ಗಾಯಗೊಂಡಿರುವ ಘಟನೆ ಗದಗ ಜಿಲ್ಲೆ ಗಜೇಂದ್ರಗಡ ಸಮೀಪ ನಡೆದಿದೆ.
ಗಜೇಂದ್ರಗಡ ಬಳಿಯ ಕೊಡಗಾನೂರು ಬಳಿ ಸುಮಾರು 30 ಪ್ರಯಾಣಿಕರಿದ್ದ ಬಸ್ ಅಪಗಾತಕ್ಕೀಡಾಗಿತ್ತು. ಇದರಲ್ಲಿ ನಾಗವ್ವ ಅಳವಂಡಿ (50) ಎನ್ನುವವರು ಮೃತಪಟ್ಟಿದ್ದು ಇತರೆ  8 ಮಂದಿ ಪ್ರಯಾಣಿಕರು ಗಾಯಗೊಂಡಿದ್ದಾರೆ.
ಗಜೇಂದ್ರಗಡದಿಂದ ಗದಗಕ್ಕೆ ತೆರಳುತ್ತಿದ್ದ ಬಸ್ ಕೊಡಗಾನೂರು ಬಳಿ ಬರುತ್ತಿದ್ದಂತೆ ಚಾಲಕನ ಅಜಾಗರೂಕತೆಯ ಕಾರಣ  ರಸ್ತೆ ಪಕ್ಕಕ್ಕೆ ಪಲ್ಟಿ ಆಗಿದೆ. ಆ ವೇಳೆ ನಾಗವ್ವ ಅವರಿಗೆ ಗಂಭೀರ ಗಾಯವಾಗಿದ್ದು ಆಂಬುಲೆನ್ಸ್ ಗೆ ಕರೆ ಮಡಿದರೂ ಅದು ಸೂಕ್ತ ಸಮಯಕ್ಕೆ ಬರದಿದ್ದಾಗ ಇನ್ನೊಂದು ಸರ್ಕಾರಿ ಬಸ್‍ನಲ್ಲಿಯೇ ಆಸ್ಪತ್ರೆಗೆ ಸಾಗಿಸಿದ್ದಾರೆ. ಆದರೆ ನಾಗವ್ವ ಮಾರ್ಗ ಮಧ್ಯದಲ್ಲಿಯೇ ಮೃತಪಟ್ಟಿದ್ದಾರೆ. ಘಟನೆಯಲ್ಲಿ ಗಾಯಗೊಂಡ 8 ಜನರನ್ನು ಗಜೇಂದ್ರಗಡ ಆಸ್ಪತ್ರೆಗೆ ದಾಖಲಿಸಲಾಗಿದೆ.
ಗಜೇಂದ್ರಗಡ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಈ ದುರ್ಘಟನೆ ಸಂಭವಿಸಿದ್ದು ಪೋಲೀಸರು ಪ್ರಕರಣ ದಾಖಲಿಸಿಕೊಂಡು  ತನಿಖೆ ಕೈಗೊಂಡಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com