ಕೆಲ ದಿನಗಳ ಹಿಂದಷ್ಟೇ ಗೌರಿ ಲಂಕೇಶ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಹೇಳಿಕೆ ನೀಡಿದ್ದ ರಾಮಚಂದ್ರ ಗುಹಾ ಅವರು, ದಾಬೋಲ್ಕರ್, ಪನ್ಸಾರೆ ಹಾಗೂ ಕಲಬುರ್ಗಿ ಹತ್ಯೆ ಮಾಡಿರುವ ಸಂಘ ಪರಿವಾರದವರೇ ಗೌರಿ ಲಂಕೇಶ್ ಹತ್ಯೆಯನ್ನೂ ಮಾಡಿರಬಹುದು ಎಂದಿದ್ದರು. ಅಲ್ಲದೆ. ಕೇಂದ್ರದಲ್ಲಿ ಆಡಳಿತ ನಡೆಸುತ್ತಿರುವ ಎನ್'ಡಿಎ ಪಕ್ಷವು ದ್ವೇಷ ಹಾಗೂ ಅಸಹಿಷ್ಣುತೆಯ ವಾತಾವರಣವನ್ನು ಸೃಷ್ಟಿಸಿದೆ ಎಂದು ಹೇಳಿದ್ದರು.