ಮಠದ ಮುಂದೆ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿರುವ ಹಿನ್ನೆಲೆಯಲ್ಲಿ ಮಠದ ಒಳಗೆ ಯಾರನ್ನು ಬಿಡಲಾಗುತ್ತಿಲ್ಲ. ಸದ್ಯ ಪರಿಸ್ಥಿತಿ ಉದ್ವಿಗ್ನವಾಗಿರುವುದರಿಂದ ಯಾವುದೇ ಭಕ್ತರನ್ನು ಮಠದ ಒಳಗೆ ಬಿಡುತ್ತಿಲ್ಲ ಎಂದು ಚಿಕ್ಕಜಾಲ ಪೊಲೀಸ್ ಠಾಣೆಯ ಹಿರಿಯ ಅಧಿಕಾರಿಗಳು ತಿಳಿಸಿದ್ದಾರೆ. ಇನ್ನು ಮಠದ ಮುಂದೆ ಜಮಾಯಿಸಿರುವ ಭಕ್ತರು ಮಠದ ಸ್ವಾಮೀಜಿ ಹಾಗೂ ಅವರ ಪುತ್ರ ಕೂಡಲೇ ಮಠವನ್ನು ತೊರೆಯಬೇಕು ಎಂದು ಆಗ್ರಹಿಸಿದ್ದಾರೆ.