ಇಂದು ದೆಹಲಿಯಲ್ಲಿ ವಿಚಾರ ಸಂಕಿರಣವೊಂದರಲ್ಲಿ ಮಾತನಾಡಿದ ಗೋಯಲ್ ಅವರು, ಬೆಂಗಳೂರಿಗೆ ಸಬ್ ಅರ್ಬಲ್ ರೈಲು ಬರಬೇಕು ಎಂಬ ಪ್ರಸ್ತಾಪವನ್ನು ಅನಂತ್ ಕುಮಾರ್ 1996ರಿಂದಲೇ ಮಾಡುತ್ತಾ ಬಂದಿದ್ದಾರೆ. ಇತ್ತೀಚಿಗೆ ನಾನು ರೈಲ್ವೆ ಸಚಿವನಾಗಿ ಅಧಿಕಾರ ವಹಿಸಿಕೊಳ್ಳು ಮುಂಚೆಯೇ ಮತ್ತೆ ಈ ಪ್ರಸ್ತಾಪ ಮಾಡಿದ್ದರು. ಅಲ್ಲದೆ ಇತ್ತೀಚೆಗೆ ನಡೆದ ನೈರುತ್ಯ ರೈಲ್ವೇ ಪ್ರಗತಿ ಪರಿಶೀಲನಾ ಸಭೆಯಲ್ಲೂ ಈ ವಿಚಾರ ಚರ್ಚೆಗೆ ಬಂದಿದೆ ಎಂದು ಅವರು ಹೇಳಿದ್ದಾರೆ.