ಬೆಂಗಳೂರು: ಬಹು ನಿರೀಕ್ಷಿತ ಈಶಾನ್ಯ ಮಾರುತಗಳು ಶುಕ್ರವಾರ ದಕ್ಷಿಣ ರಾಜ್ಯಗಳನ್ನು ಪ್ರವೇಶಿಸಿದ್ದು .ತಮಿಳುನಾಡು ಮತ್ತು ಕರ್ನಾಟಕ ರಾಜ್ಯಕ್ಕೆ ಹೊಂದಿಕೊಂಡಿರುವ ಕೇರಳ, ಆಂಧ್ರ ಪ್ರದೇಶದ ದಕ್ಷಿಣ ಕರಾವಳಿ, ರಾಯಲಸೀಮಾ ಮತ್ತು ಕರ್ನಾಟಕದ ದಕ್ಷಿಣ ಒಳನಾಡಿಗೆ ಈಶಾನ್ಯ ಮಾರುತಗಳು ಹಿಂಗಾರು ಮಳೆಯನ್ನು ಹೊತ್ತು ತರಲಿವೆ ಎಂದು ಭಾರತೀಯ ಹವಾಮಾನ ಇಲಾಖೆ ಹೇಳಿದೆ.