ತಾವು ಸರ್ಕಾರವನ್ನು ಜನರ ಹತ್ತಿರ ತಂದಿದ್ದೀರಿ. ಇಡೀ ದೇಶಕ್ಕೆ ಇಂದು ಒಂದು ಎಂಬ ಭಾವನೆ ಮೂಡಿದೆ. ಮೂರು ವರ್ಷಗಳಲ್ಲಿ ನಾನು ಬಹಳಷ್ಟು ಬದಲಾವಣೆಗಳನ್ನು ಗಮನಿಸಿದ್ದೇನೆ. ನೀವೊಂದು 'ಜಾಗೃತ ಭಾರತ'ವನ್ನು ನಿರ್ಮಿಸಿದ್ದೀರಿ. ನಿಮ್ಮಿಂದಾಗಿ ಅಂತಾರಾಷ್ಟ್ರೀಯ ಮಟ್ಟದಲ್ಲಿ ದೇಶದ ಸಂಬಂಧ ಸುಧಾರಣೆಯಾಗಿದೆ. ಧರ್ಮಸ್ಥಳ ಕ್ಷೇತ್ರ ಧಾರ್ಮಿಕ, ಆಧ್ಯಾತ್ಮಿಕ ಕೇಂದ್ರವಾಗಿ ಸೌಹಾರ್ದ ವಾತಾವರಣ ನಿರ್ಮಿಸಿದೆ. ದೇವಸ್ಥಾನದ ಮೂಲಕ ಜನತೆಗೆ ಅನ್ನದಾನ, ಔಷಧದಾನ, ವಿದ್ಯಾದಾನ ಮತ್ತು ಮುಖ್ಯವಾಗಿ ಅಭಯದಾನ ನೀಡಲಾಗುತ್ತಿದೆ. ಅಭಯದಾನ ಮೂಲಕ ಮೌಲ್ಯಯುತ ಶಿಕ್ಷಣ ಕೊಡಲಾಗುತ್ತಿದೆ. ಎಸ್ ಕೆಆರ್ ಡಿಪಿ ಮೂಲಕ ಸ್ವಸಹಾಯ ಗುಂಪುಗಳ ಮಹಿಳೆಯರನ್ನು ಸ್ವಾವಲಂಬಿಗಳನ್ನಾಗಿ ಮಾಡಲಾಗಿದೆ ಎಂದು ಅವರು ವಿವರಿಸಿದರು.