ಇದೇ ಕಾರ್ಯಕ್ರಮದ್ಲಲಿ ಧರ್ಮಸ್ಥಳ ಸಂಸ್ಥೆ ಕೈಗೊಂಡಿರುವ ಪರಿಸರ ಸಂರಕ್ಷಣೆ ಅಭಿಯಾನದ ಲೋಗೋ ಉದ್ಘಾಟನೆಗೊಂಡಿದ್ದು, ಕೃಷಿ, ಪರಿಸರದ ಬಗ್ಗೆಯೂ ಮಾತನಾಡಿರುವ ಪ್ರಧಾನಿ ಮೋದಿ, ನಮ್ಮ ಹಿರಿಯರು ನಮಗೆ ನೀಡಿರುವ ಪರಿಸರವನ್ನು ನಾವು ಮುಂದಿನ ಪೀಳಿಗೆಗೆ ನಾಶವಾಗದಂತೆ ನೀಡಬೇಕಿದೆ, ಇದಕ್ಕಾಗಿ ಪರಿಸರ ಸಂರಕ್ಷಣೆಯಾಗಬೇಕಿದೆ. 2022ರ ವೇಳೆಗೆ ಕೃಷಿಯಲ್ಲಿ ಯೂರಿಯಾ ಬಳಕೆಯನ್ನು ಶೇ.50 ರಷ್ಟು ಕಡಿಮೆ ಮಾಡಿದರೆ ಫಸಲು ಹೆಚ್ಚುತ್ತದೆ. ಭೂಮಿಯ ಸತ್ವವೂ ಉಳಿಯುತ್ತದೆ, ಆದ್ದರಿಂದ ರೈತರು ಯೂರಿಯಾ ಬಳಕೆ ಕಡಿಮೆ ಮಾಡಲು ಸಂಕಲ್ಪ ಮಾಡಬೇಕು ಎಂದು ಮೋದಿ ಕರೆ ನೀಡಿದ್ದಾರೆ.