ಕಳೆದ ಜೂನ್ ನಲ್ಲಿ ರಾಜ್ಯಕ್ಕೆ ಪ್ರತ್ಯೇಕ ಧ್ವಜದ ಬೇಡಿಕೆಯನ್ನು ಪರಿಶೀಲಿಸಲು 9 ಸದಸ್ಯರ ಸಮಿತಿಯನ್ನು ರಚಿಸುವ ಕುರಿತು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಕಾರ್ಯದರ್ಶಿ ಅವರು ಆದೇಶ ನೀಡಿದ್ದರು. ಸಮಿತಿ ಮುಖ್ಯ ಕಾರ್ಯದರ್ಶಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಡಿಪಿಎಆರ್ ಕಾರ್ಯದರ್ಶಿ, ಕಾನೂನು ಇಲಾಖೆಯ ಕಾರ್ಯದರ್ಶಿ, ಕಾರ್ಯದರ್ಶಿ - ಗೃಹ ಅಧ್ಯಕ್ಷ- ಕನ್ನಡ ಸಾಹಿತ್ಯ ಪರಿಷತ್, ಕನ್ನಡ ಅಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷರು, ಹಂಪಿಯಲ್ಲಿರುವ ಕನ್ನಡ ವಿಶ್ವವಿದ್ಯಾನಿಲಯದ ರಿಜಿಸ್ಟ್ರಾರ್ ಮತ್ತು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ನಿರ್ದೇಶಕರುಗಳನ್ನು ಒಳಗೊಂಡಿದೆ. ಆದರೆ ಈ ಐದು ತಿಂಗಳಲ್ಲಿ ಸಮಿತಿ ಸದಸ್ಯರು ಒಮ್ಮೆ ಸಹ ಸಭೆ ನಡೆಸಿಲ್ಲ.