ವಿವಿಧ ಸರಕಾರಿ ಕಾಲೇಜುಗಳಲ್ಲಿ ಅಧ್ಯಾಪಕ ಹಾಗು ಪ್ರಾಧ್ಯಾಪಕರಾಗಿ ಕೆಲಸ ಮಾಡಿದ್ದ ನಿಸಾರ್ 1984-87ರವರೆಗೆ ಕರ್ನಾಟಕ ಸಾಹಿತ್ಯ ಅಕಾಡೆಮಿ ಅಧ್ಯಕ್ಷರಾಗಿದ್ದರು. ಇವರಿಗೆ ನಾಡೋಜ ಪುರಸ್ಕಾರ, ಮಂಜೇಶ್ವರ ಗೋವಿಂದ ಪೈ ಪ್ರಶಸ್ತಿ, ಶಿವಮೊಗ್ಗದಲ್ಲಿ ನಡೆದ 73ನೇ ಅಖಿಲ ಭಾರತ ಸಾಹಿತ್ಯ ಸಮ್ಮೇಳನದ ಅಧ್ಯಕ್ಷತೆ, ಭಾರತ ಸರ್ಕಾರದ ಪ್ರತಿಷ್ಟಿತ ಪದ್ಮಶ್ರೀ, ಕುವೆಂಪು ಹೆಸರಿನ ವಿಶ್ವ ಮಾನವ ಪ್ರಶಸ್ತಿ, ವಿ.ಕೃ.ಗೋಕಾಖ್ ಪ್ರಶಸ್ತಿ ಸೇರಿದಂತೆ ಹಲವಾರು ಪ್ರಶಸ್ತಿಗಳು ಬಂದಿವೆ. ಈ ಬಾರಿ ಮೈಸೂರು ದಸರಾ ಉದ್ಘಾಟನೆಯನ್ನು ಸಹ ಇವರು ನೆರವೇರಿಸಿದ್ದರು.