ಮಂಗಳೂರು: ನೇತ್ರಾವತಿ ನದಿಯಲ್ಲಿ ಈಜಲು ತೆರಳಿದ್ದ ಮೂವರು ವಿದ್ಯಾರ್ಥಿಗಳು ನೀರಲ್ಲಿ ಮುಳುಗಿ ಮೃತಪಟ್ಟಿರುವ ಘಟನೆ ಕೊಣಾಜೆ ಇನ್ನೋಳಿಯ ನಡುಗುಡ್ಡೆಯಲ್ಲಿ ನಡೆದಿದೆ.
ಇವರು ವಳಚ್ಚಿಲ್ ನಲ್ಲಿರುವ ಶ್ರೀನಿವಾಸ ಎಂಜಿನಿಯರಿಂಗ್ ಕಾಲೇಜಿನವರಾಗಿದ್ದು 8 ವಿದ್ಯಾರ್ಥಿಗಳು ನದಿಯಲ್ಲಿ ಈಜಲು ತೆರಳಿದ್ದರು, ಈ ಸಂದರ್ಭದಲ್ಲಿ ವಿಶಾಲ್(21), ಶುಭಂ(22), ಶ್ರೀರಾಮ್(21) ಎನ್ನುವ ಮೂವರು ವಿದ್ಯಾರ್ಥಿಗಳು ಮೃತಪಟ್ಟಿದ್ದಾರೆ. ಉಳಿದ 5 ವಿದ್ಯಾರ್ಥಿಗಳನ್ನು ರಕ್ಷಿಸಲಾಗಿದೆ.
ಕೊಣಾಜೆ ಠಾಣಾವ್ಯಾಪ್ತಿಯಲ್ಲಿ ಪ್ರಕರಣ ನಡೆದಿದ್ದು ತನಿಖೆ ಮುಂದುವರಿದಿದೆ.