ಈಗಾಗಲೇ 800 ಕೋಟಿ ರೂಪಾಯಿ ವೆಚ್ಚದ ಕಾಮಗಾರಿ ಪ್ರಗತಿಯಲ್ಲಿದ್ದು ಅಧಿಕ ಮಳೆಯಾದರೆ ಅಲ್ಲಲ್ಲಿ ನೀರು ನಿಲ್ಲುವ ಕಾರಣ ಬಿಬಿಎಂಪಿಯು ಹೆಚ್ಚುವರಿ ಕೆಲಸವನ್ನು ಘೋಷಿಸಿದೆ. ಕಾಮಗಾರಿಯಲ್ಲಿ ಹೊಸ ಒಳ ಚರಂಡಿಗಳ ನಿರ್ಮಾಣ, ಹಳೆಯ ಚರಂಡಿಗಳನ್ನು ಬದಲಾಯಿಸುವ ಕಾಮಗಾರಿಗಳನ್ನು ಹೊಂದಲಾಗಿದೆ.ಈ ಯೋಜನೆ ಕುರಿತು ಇಂದು ಸಂಪುಟ ಸಭೆಯಲ್ಲಿ ಪ್ರಸ್ತಾಪಿಸಲಾಗುತ್ತದೆ. ಇದು ಸಣ್ಣ ಕಾಮಗಾರಿಯಲ್ಲ. ವಿಪರೀತ ಮಳೆ ಬಂದಾಗ ಬೆಂಗಳೂರು ನಗರದಲ್ಲಿ ಅಧಿಕ ಹಾನಿಯುಂಟಾಗದಂತೆ ಶಾಶ್ವತ ಪರಿಹಾರ ಕಲ್ಪಿಸಬೇಕಾಗಿದೆ ಎನ್ನುತ್ತಾರೆ ಸಚಿವರು.