ಮಂಗಳೂರು ಚಲೋ, ಬೈಕ್ ರ್ಯಾಲಿ ವೇಳೆಯಲ್ಲಿ ಅಹಿತಕರ ಘಟನೆಗಳು ಉಂಟಾದರೆ ನಮ್ಮ ಸರ್ಕಾರಕ್ಕೆ ಕೆಟ್ಟ ಹೆಸರು ಬರಲಿದೆ. ಬಿಜೆಪಿಯವರು ಬೈಕ್ ರ್ಯಾಲಿಗಾಗಿ ಅನುಮತಿ ಕೇಳಿದ್ದಾರೆ. ಪ್ರಜಾಪ್ರಭುತ್ವದಲ್ಲಿ ಎಲ್ಲರಿಗೂ ಪ್ರತಿಭಟನೆ ಮಾಡುವ ಅವಕಾಶ ಇದೆ. ಆದರೆ ಬೈಕ್ ರ್ಯಾಲಿಯಿಂದಾಗಿ ಟ್ರಾಫಿಕ್ ಸಮಸ್ಯೆ ಉಂಟಾಗಿ ಜನರಿಗೆ ತೊಂದರೆಯುಂಟಾಗಲಿದೆ. ಈ ಹಿನ್ನೆಲೆಯಲ್ಲಿ ಕಾಲ್ನಡಿಗೆ ಜಾಥ ಕೈಗೊಳ್ಳುವಂತೆ ಬಿಜೆಪಿ ನಿಯೋಗಕ್ಕೆ ಮನವಿ ಮಾಡಿದೆ. ನಾವೂ ಸಹ ಬಳ್ಳಾರಿಗೆ ಕಾಲ್ನಡಿಗೆಯಲ್ಲೇ ಪಾದಯಾತ್ರೆ ಮಾಡಿದ್ದೆವು. ಆದರೆ ಬಿಜೆಪಿ ಪಕಷದವರು ನಮ್ಮ ಮನವಿಯನ್ನು ಒಪ್ಪಿಲ್ಲ ಎಂದು ಸಚಿವರು ತಿಳಿಸಿದ್ದಾರೆ.