‘ಮಂಗಳೂರು ಚಲೋ’ ಬಿಜೆಪಿ ಬೈಕ್‌ ರ್ಯಾಲಿಗೆ ಅನುಮತಿ ನಿರಾಕರಣೆ

ಪಿಎಫ್ಐ, ಕೆ.ಎಫ್.ಡಿ ಸಂಘಟನೆಗಳನ್ನು ನಿಷೇಧಿಸಬೇಕೆಂದು ಆಗ್ರಹಿಸಿ ಮತ್ತು ಹಿಂದೂ ಕಾರ್ಯಕರ್ತರ ಹತ್ಯೆ ಖಂಡಿಸಿ ಇದೇ....
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
ಮಂಗಳೂರು: ಪಿಎಫ್ಐ, ಕೆ.ಎಫ್.ಡಿ ಸಂಘಟನೆಗಳನ್ನು ನಿಷೇಧಿಸಬೇಕೆಂದು ಆಗ್ರಹಿಸಿ ಮತ್ತು ಹಿಂದೂ ಕಾರ್ಯಕರ್ತರ ಹತ್ಯೆ ಖಂಡಿಸಿ ಇದೇ ಗುರುವಾರ ಬಿಜೆಪಿ ಯುವ‌ ಮೋರ್ಚಾ ವತಿಯಿಂದ ನಡೆಸಲು ಉದ್ದೇಶಿಸಿದ್ದ ಮಂಗಳೂರು ಚಲೋ ಬೈಕ್ ರ್ಯಾಲಿ ನಡೆಸಲು ಪೊಲೀಸರು ಅನುಮತಿ ನಿರಾಕರಿಸಿದ್ದಾರೆ.
ಇಂದು ಮಂಗಳೂರು ನಗರ ಪೊಲೀಸ್ ಆಯುಕ್ತ ಟಿ.ಆರ್.ಸುರೇಶ್ ಅವರ ಅಧ್ಯಕ್ಷತೆಯಲ್ಲಿ ನಡೆದ ಹಿರಿಯ‌ ಪೊಲೀಸ್ ಅಧಿಕಾರಿಗಳ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ. ಸಭೆ ನಡೆಸುವುದಕ್ಕೂ ಅನುಮತಿ ಇಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.
ಕಾನೂನು ಸುವ್ಯವಸ್ಥೆಗೆ ಧಕ್ಕೆಯಾಗುವ ಸಾಧ್ಯತೆ ಇರುವ ಹಿನ್ನೆಲೆಯಲ್ಲಿ ಬಿಜೆಪಿ ಯುವ ಮೋರ್ಚಾ ಬೈಕ್ ರ್ಯಾಲಿಗೆ ಮತ್ತು ಯಾವುದೇ ಸಾರ್ವಜನಿಕ ಸಭೆ ನಡೆಸಲು ಅನುಮತಿ ನಿರಾಕರಿಸಲಾಗಿದೆ ಮತ್ತು ಈ ಕುರಿತು ಬಿಜೆಪಿ ಯುವ ‌ಮೋರ್ಚಾ ಮುಖಂಡರಿಗೆ ಅಧಿಕೃತವಾಗಿ ಮಾಹಿತಿ ನೀಡುವುದಾಗಿ ನಗರ ಪೊಲೀಸ್ ಆಯುಕ್ತ ಟಿ ಆರ್ ಸುರೇಶ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com