ಈ ಬಗ್ಗೆ ಟ್ವಿಟರ್ ನಲ್ಲಿ ತಮ್ಮ ಪ್ರತಿಕ್ರಿಯೆ ನೀಡಿರುವ ಸಿಎಂ ಸಿದ್ದರಾಮಯ್ಯ ಅವರು, " ಕರ್ನಾಟಕದ ಪ್ರಗತಿಪರ ಚಿಂತನೆಯ ಹೆಮ್ಮೆಯಾಗಿದ್ದ ಧೀಮಂತ ಪತ್ರಕರ್ತೆ ಗೌರಿ ಲಂಕೇಶ್ ಅವರನ್ನು ಪೈಶಾಚಿಕವಾಗಿ ಹತ್ಯೆಗೈದಿರುವುದನ್ನು ಕಟು ಶಬ್ಧಗಳಲ್ಲಿ ಖಂಡಿಸುತ್ತೇನೆ. ಪದಗಳಿಗೂ ನಿಲುಕದ ಇಂಥ ಹೀನಕೃತ್ಯ ಎಸೆಗಿದವರನ್ನು, ಇದರ ಹಿಂದಿನ ದುಷ್ಟಶಕ್ತಿಗಳನ್ನು ಪತ್ತೆಹಚ್ಚಿ ಶಿಕ್ಷಿಸಲು ಸರ್ವ ಪ್ರಯತ್ನಗಳನ್ನೂ ಮಾಡಲಾಗುವುದು" ಎಂದು ಹೇಳಿದ್ದಾರೆ.