ಕಳೆದ ಮಂಗಳವಾರ ರಾತ್ರಿ ನಡೆದ ಪತ್ರಕರ್ತೆಯ ಹತ್ಯೆ ಪ್ರಕರಣದ ತನಿಖೆಗಾಗಿ ರಾಜ್ಯ ಸರ್ಕಾರ ನಿನ್ನೆ ವಿಶೇಷ ತನಿಖಾ ತಂಡವನ್ನು ರಚಿಸಿತ್ತು. ಇಂದು ಎಸ್ ಐಟಿ ಅಧಿಕಾರಿಗಳು ಪ್ರಕರಣ ಸಂಬಂಧ ಸಿಐಡಿ ಕಚೇರಿಯಲ್ಲಿ ಸಭೆ ನಡೆಸುವ ಮೂಲಕ ತನಿಖೆ ಆರಂಭಿಸಿದ್ದು, ಸಭೆಯ ನಂತರ ಬಸವನಗುಡಿಯಲ್ಲಿರುವ ಗೌರಿ ಲಂಕೇಶ್ ಅವರ ಕಚೇರಿಗೆ ಇಬ್ಬರು ಅಧಿಕಾರಿಗಳು ಭೇಟಿ ನೀಡಿ ಮಾಹಿತಿ ಸಂಗ್ರಹಿಸಿದ್ದಾರೆ.