ಬೆಂಗಳೂರು ವಿಶ್ವವಿದ್ಯಾಲಯದ ಕೆಂಪೇಗೌಡ ಅಧ್ಯಯನ ಕೇಂದ್ರ ಇದೇ ಶನಿವಾರ ದೊಡ್ಡ ಕಾರ್ಯಕ್ರಮವನ್ನು ಆಯೋಜಿಸಿದ್ದು ಅಲ್ಲಿ ಸುಮಾರು 6,000 ಮಂದಿ ಭಾಗವಹಿಸುವ ನಿರೀಕ್ಷೆಯಿದೆ. ಜೆಬಿ ಪೊಲೀಸ್ ಠಾಣೆಯ ಹತ್ತಿರ ಜ್ಞಾನ ಭಾರತಿ ಕ್ಯಾಂಪಸ್ ನ ಮಾರ್ಗ ಮಧ್ಯೆ ಕಾರ್ಯಕ್ರಮದ ವೇದಿಕೆ ನಿರ್ಮಿಸಲಿದ್ದಾರೆ. ಇದಕ್ಕಾಗಿ ಈ ಮಾರ್ಗವನ್ನು ಮುಚ್ಚಲಾಗಿದೆ.