ಒಂದೇ ಆರೋಪಕ್ಕೆ ಸಂಬಂಧಿಸಿದಂತೆ ಹಲವು ಅಕ್ರಮಗಳ ಕುರಿತು ಪ್ರತ್ಯೇಕವಾಗಿಯೇ ಎಫ್ಐಆರ್ ದಾಖಲಿಸಿಕೊಳ್ಳಲು ಅವಕಾಶವಿದೆ ಎಂದು ಸುಪ್ರೀಂಕೋರ್ಟ್ನ ಕೆಲ ತೀರ್ಪುಗಳನ್ನು ಉಲ್ಲೇಖೀಸಿದ ರವಿವರ್ಮಕುಮಾರ್, ಅರ್ಜಿದಾರ ಯಡಿಯೂರಪ್ಪ,ಡಾ.ಶಿವರಾಮ ಕಾರಂತ ಬಡವಾಣೆಯ ಭೂ ಸ್ವಾಧೀನ ಪ್ರಕ್ರಿಯೆಯಿಂದ 20 ಮಂದಿಯ ಜಮೀನು ಕೈ ಬಿಡುವಂತೆ, ಬೇರೆ ಬೇರೆ ಸರ್ವೇ ನಂಬರ್ಗಳಲ್ಲಿರುವ ಜಮೀನುಗಳನ್ನು ಭೂ ಸ್ವಾಧೀನ ಪ್ರಕ್ರಿಯೆಯಿಂದ ಕೈ ಬಿಡುವಂತೆ ಪ್ರತ್ಯೇಕವಾಗಿಯೇ ಆದೇಶ ನೀಡಿರುವ ಆರೋಪವಿದೆ. ಹೀಗಾಗಿ ಪ್ರತ್ಯೇಕವಾಗಿಯೇ ಎಫ್ಐಆರ್ಗಳನ್ನು ದಾಖಲಿಸಿ ಎಸಿಬಿ ತನಿಖೆ ನಡೆಸಬೇಕಿದೆ ಎಂದರು.