ವಿಜಯಪುರದಲ್ಲಿ ಮಳೆ ಅವಘಡ: ಪ್ರತ್ಯೇಕ ಘಟನೆಗಳಲ್ಲಿ ನಾಲ್ವರ ಸಾವು

ಕಳೆದ ಎರಡು ದಿನಗಳಿಂದ ಸತತವಾಗಿ ಸುರಿದ ಮಳೆಗೆ ಮನೆಯ ಗೋಡೆ ಕುಸಿದು ಬಿದ್ದ ಪ್ರತ್ಯೇಕ ಘಟನೆಗಳಲ್ಲಿ, ಇಂಡಿ ತಾಲ್ಲೂಕಿನಲ್ಲಿ ನಾಲ್ವರು ಮೃತಪಟ್ಟಿದ್ದಾರೆ....
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
Updated on
ವಿಜಯಪುರ:  ಕಳೆದ ಎರಡು ದಿನಗಳಿಂದ ಸತತವಾಗಿ ಸುರಿದ ಮಳೆಗೆ ಮನೆಯ ಗೋಡೆ ಕುಸಿದು ಬಿದ್ದ ಪ್ರತ್ಯೇಕ ಘಟನೆಗಳಲ್ಲಿ, ಇಂಡಿ ತಾಲ್ಲೂಕಿನಲ್ಲಿ ನಾಲ್ವರು ಮೃತಪಟ್ಟಿದ್ದಾರೆ.
ಹಳಗುಣಕಿಯ ರಾಚಪ್ಪ ಗಣಪತಿ ಸುತಾರ, ಸಿದ್ದವ್ವ ರಾಚಪ್ಪ ಸುತಾರ, ಜೇವೂರಿನ ಕರಬಸಪ್ಪ ಪೀರಪ್ಪ ಆಕಳವಾಡಿ, ಇಂದ್ರಾಬಾಯಿ ಕರಬಸಪ್ಪ ಆಕಳವಾಡಿ ಮೃತ ದುರ್ದೈವಿಗಳು.
ಸತತ ಮಳೆಯಿಂದಾಗಿ ಗೋಡೆಗೆ ತೇವಾಂಶ ಹತ್ತಿತ್ತು. ಇದರ ಜತೆಗೆ ಎರಡು ದಿನ ಸುರಿದ ಮಳೆಗೆ ಗೋಡೆ ನೆನೆದು ಹೊರಭಾಗಕ್ಕೆ ಹೊಂದಿಕೊಂಡಂತಿದ್ದ  ಶೆಡ್‌ ಕುಸಿದು ಬಿದ್ದಿದೆ. ಇದರ ಪರಿಣಾಮ ಒಳಭಾಗದಲ್ಲಿ ಮಲಗಿದ್ದ ದಂಪತಿ ಮಣ್ಣಿನಡಿ ಸಿಲುಕಿ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ. ವಿಜಯಪುರ ಜಿಲ್ಲೆಯಾದ್ಯಂತ ಗುರುವಾರ ರಾತ್ರಿ ಭಾರಿ ಮಳೆಯಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X
Google Preferred source

Advertisement

X
Kannada Prabha
www.kannadaprabha.com