ಇನ್ನು ಮಳೆಯ ಕಾರಣದಿಂದ ಗಾಳಿ ಜೋರಾಗಿ ಬೀಸಿದ್ದರಿಂದ ಜೆ.ಪಿ.ನಗರದ ಎರಡು ಕಡೆಗಳಲ್ಲಿ ಮರಗಳು ಉರುಳಿಬಿದ್ದಿವೆ. ಶಿವಾನಂದ ವೃತ್ತದ ಕೆಳಸೇತುವೆಯಲ್ಲಿ ನೀರು ನಿಂತುಕೊಂಡು ರಾತ್ರಿ ಬಹುಹೊತ್ತಿನವರೆಗೆ ವಾಹನಗಳ ಸಂಚಾರ ಬಂದ್ ಆಯಿತು.
ಮೆಜೆಸ್ಟಿಕ್, ನೃಪತುಂಗ ರಸ್ತೆ, ಮೈಸೂರು ರಸ್ತೆ, ತುಮಕೂರು ರಸ್ತೆಯಲ್ಲಿ ವಾಹನಗಳ ದಟ್ಟಣೆ ಕಂಡುಬಂತು. ನಗರದಲ್ಲಿ ಸರಾಸರಿ 3 ಮಿ.ಮೀ ಮಳೆಯಾಗಿದೆ. ಸಂಪಂಗಿರಾಮನಗರ 17.5 ಮಿ.ಮೀ, ಆನೇಕಲ್ 11 ಮಿ.ಮೀ, ರಾಜಾಜಿನಗರ 19 ಮಿ.ಮೀ ಮಳೆ ಸುರಿದಿದೆ ಎಂದು ಹವಾಮಾನ ಇಲಾಖೆಯ ಅಧಿಕಾರಿ ತಿಳಿಸಿದರು.