ಹುಬ್ಬಳ್ಳಿ: ಐಬಿಪಿಎಸ್ ಬ್ಯಾಂಕಿಗ್ ಪರೀಕ್ಷೆಯಲ್ಲಿ ಹೊರ ರಾಜ್ಯದ ಅಭ್ಯರ್ಥಿಗಳಿಗೆ ಅವಕಾಶ ನೀಡಿ, ಕನ್ನಡಿಗರಿಗೆ ಅನ್ಯಾಯ ಮಾಡಲಾಗುತ್ತಿದೆ ಎಂದು ಪರೀಕ್ಷೆಗೆ ಬಂದಿದ್ದ ಅಭ್ಯರ್ಥಿಗಳು ಹುಬ್ಬಳ್ಳಿಯಲ್ಲಿ ಪ್ರತಿಭಟನೆ ನಡೆಸುತ್ತಿದ್ದಾರೆ, ಪ್ರತಿಭಟನಾ ನಿರತರಲ್ಲಿ ಒಬ್ಬರು ಬ್ಲೇಡ್ನಿಂದ ಕೈ ಬೆರಳು ಕೊಯ್ದುಕೊಂಡಿದ್ದಾರೆ. ಬೆರಳು ಕೊಯ್ದುಕೊಂಡವರನ್ನು ಸಲೀಂ ಎಂದು ಗುರುತಿಸಲಾಗಿದೆ. ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.