ಬೆಂಗಳೂರು: ಜೀವ ಬೆದರಿಕೆ ಹಿನ್ನೆಲೆಯಲ್ಲಿ ನಗರದಲ್ಲಿರುವ ಬರಹಗಾರರು ಹಾಗೂ ಚಿಂತಕರು ಸೇರಿ 16 ಮಂದಿಗೆ ಪೊಲೀಸ್ ಭದ್ರತೆ ಒದಗಿಸಲಾಗಿದೆ.
ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಹಿನ್ನೆಲೆಯಲ್ಲಿ, ಸಿಎಂ ಸಿದ್ದರಾಮಯ್ಯ ನಿರ್ದೇಶನದಂತೆ 16 ಮಂದಿಗೆ ಪೊಲೀಸ್ ಭದ್ರತೆ ನೀಡಲಾಗಿದೆ. ಗುಪ್ತಚರ ಇಲಾಖೆ ವರದಿ ಅನ್ವಯ ಇವರಿಗೆಲ್ಲಾ ಒಬ್ಬೊಬ್ಬ ಸೆಕ್ಯೂರಿಟಿ ಅಧಿಕಾರಿಯನ್ನು ನಿಯೋಜಿಸಲಾಗಿದೆ.
ಸಂಶೋಧಕ ಎಂ.ಚಿದಾನಂದಮೂರ್ತಿ, ಸ್ವಾತಂತ್ರ್ಯ ಹೋರಾಟಗಾರ ಎಚ್.ಎಸ್. ದೊರೆಸ್ವಾಮಿ, ಗಿರೀಶ್ ಕಾರ್ನಾಡ, ಚಂದ್ರಶೇಖರ ಕಂಬಾರ, ಬರಗೂರು ರಾಮಚಂದ್ರಪ್ಪ, ಡಾ. ಸಿದ್ದಲಿಂಗಯ್ಯ, ಸಿಎಂ ಸಲಹೆಗಾರ ದಿನೇಶ್ ಅಮಿನ್ ಮಟ್ಟು, ನಿವೃತ್ತ ಐಎಎಸ್ ಅಧಿಕಾರಿ ಎಸ್.ಎ ಜಾಮದಾರ್ ಅವರಿಗೆ ಸರ್ಕಾರ ಭದ್ರತೆ ಒದಗಿಸಿದೆ.
ನಿಡುಮಾಮಿಡಿ ಮಠದ ಚೆನ್ನಮಲ್ಲಸ್ವಾಮೀಜಿ, ಚಂದ್ರಶೇಖರ ಪಾಟೀಲ, ಪ್ರಜಾ ಪರಿವರ್ತನಾ ವೇದಿಕೆಯ ಬಿ. ಗೋಪಾಲ, ಸಿ.ಎಸ್. ದ್ವಾರಕನಾಥ್, ಕೆ. ಮರುಳಸಿದ್ದಪ್ಪ, ಬಿ.ಟಿ. ಲಲಿತಾನಾಯಕ್, ಟಿ.ಎನ್. ಸೀತಾರಾಂ, ಕೆ.ಎಸ್. ವಿಮಲಾ, ಅವರಿಗೂ ಪೊಲೀಸ್ ಭದ್ರತೆ ನೀಡಲಾಗಿದೆ.