ರಾಮಲಿಂಗಾ ರೆಡ್ಡಿ ಅವರು ಗೃಹ ಸಚಿವರಾದ ಬಳಿಕ ಮೊದಲ ಬಾರಿಗೆ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹಕ್ಕೆ ಮಂಗಳವಾರ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದರು. ಶಶಿಕಲಾ ಅವರು ಉಳಿದುಕೊಂಡಿರುವ ಬ್ಯಾರಕ್ಗೆ ಹೋಗಿದ್ದ ಸಚಿವರು, ಅವರನ್ನು ಮಾತನಾಡಿಸಿ ಕುಶಲೋಪರಿ ವಿಚಾರಿಸಿದರು. ಜೈಲಿನ ಮಹಿಳಾ ಹಾಗೂ ಪುರುಷ ಕೈದಿಗಳನ್ನು ಮಾತನಾಡಿಸಿ ಸಮಸ್ಯೆ ಆಲಿಸಿದ್ದರು.