ಬೆಂಗಳೂರು ಸಿಟಿ ಪ್ರವಾಸಕ್ಕೆಂದು ಇರುವ ಬಸ್ಸಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಮ್ಮ ಸಂಪುಟದ ಕೆಲವು ಸಹೋದ್ಯೋಗಿಗಳು, ಪಕ್ಷದ ಕಾರ್ಯಕರ್ತರು, ಅಧಿಕಾರಿಗಳೊಂದಿಗೆ ನಗರ ಭೇಟಿಗೆಂದು ಹೊರಟಿದ್ದರು. ಸಿಎಂ ಜೊತೆಗೆ ಬೆಂಗಳೂರು ನಗರಾಭಿವೃದ್ಧಿ ಸಚಿವ ಕೆ.ಜೆ.ಜಾರ್ಜ್, ನಗರಾಭಿವೃದ್ಧಿ ಸಚಿವ ಆರ್.ರೋಶನ್ ಬೇಗ್, ಗೃಹ ಸಚಿವ ರಾಮಲಿಂಗಾ ರೆಡ್ಡಿ, ಸಾರಿಗೆ ಸಚಿವ ಹೆಚ್.ಎಂ.ರೇವಣ್ಣ, ಮೇಯರ್ ಜಿ. ಪದ್ಮಾವತಿ ಬಿಬಿಎಂಪಿ ಆಯುಕ್ತ ಎನ್. ಮಂಜುನಾಥ್ ಪ್ರಸಾದ್ ಮತ್ತು ಬಿಡಬ್ಲ್ಯುಎಸ್ಎಸ್ ಬಿ ಅಧ್ಯಕ್ಷ ತುಶಾರ್ ಗಿರಿನಾಥ್ ಇದ್ದರು.