ದಸರಾ ಮಹೋತ್ಸವದಲ್ಲಿ ಹೆಚ್ಚಾಗಿ ಪ್ರವಾಸಿಗರು ಆಗಮಿಸಲಿದ್ದು , ವಾಹನಗಳ ದಟ್ಟಣೆ, ಪಾರ್ಕಿಂಗ್ ಸಮಸ್ಯೆ ಹಿನ್ನೆಲೆಯಲ್ಲಿ ಚಾಮುಂಡಿ ಬೆಟ್ಟಕ್ಕೆ ಖಾಸಗಿ ವಾಹನಗಳ ನಿಷೇಧಕ್ಕೆ ಜಿಲ್ಲಾಧಿಕಾರಿ ರಂದೀಪ್ ಅವರಿಗೆ ಪೊಲೀಸರು ಪ್ರಸ್ತಾವನೆ ಸಲ್ಲಿಸಲಾಗಿದೆ. ಸೆಪ್ಟೆಂಬರ್ 21ರಿಂದ ಅಕ್ಟೋಬರ್ 5ರವರೆಗೆ ಖಾಸಗಿ ವಾಹನಗಳನ್ನು ನಿಷೇಧಿಸಿ ಆಷಾಢ ಶುಕ್ರವಾರದ ಮಾದರಿಯಲ್ಲಿ ಲಲಿತ ಮಹಲ್ ಹೆಲಿಪ್ಯಾಡ್ನಿಂದ ಕೆಎಸ್ಆರ್ಟಿಸಿ ಬಸ್ಗಳ ಮೂಲಕ ಪ್ರವಾಸಿಗರನ್ನು ಬೆಟ್ಟಕ್ಕೆ ಕರೆದೊಯ್ದು ಮತ್ತೆ ಹಿಂದಿರುಗುವ ವ್ಯವಸ್ಥೆ ಬಗ್ಗೆ ಪ್ರಸ್ತಾವನೆಯಲ್ಲಿ ಸೂಚಿಸಲಾಗಿದೆ. ಬೆಟ್ಟದಲ್ಲಿ ವಾಸಿಸುತ್ತಿರುವವರು, ಗಣ್ಯಾತಿಗಣ್ಯರು ಸಂಚರಿಸಲು ವ್ಯವಸ್ಥೆ ಮಾಡುವಂತೆ ಪೊಲೀಸರು ಜಿಲ್ಲಾಧಿಕಾರಿ ರಂದೀಪ್ ಅವರಿಗೆ ಪ್ರಸ್ತಾವನೆ ಸಲ್ಲಿಸಿದ್ದಾರೆ.