ಇದೇ ರೀತಿಯ ಯೋಜನೆ ಅಭಿವೃದ್ಧಿ ಹೊಂದಿದ ದೇಶಗಳಲ್ಲಿವೆ. ಸಾಮಾನ್ಯವಾಗಿ ವಿದ್ಯುತ್ ಚಾಲಿತ ವಾಹನಗಳ ಅಧಿಕ ವೆಚ್ಚ ಮತ್ತು ಇತರ ಕೆಲವೊಂದು ಕಾರಣಗಳಿಂದಾಗಿ ಖರೀದಿಸಲು ಹಿಂದೇಟು ಹಾಕುತ್ತಾರೆ. ಆದರೆ ಬೆಂಗಳೂರಿನಂತಹ ನಗರಗಳಲ್ಲಿ ಮಾಲಿನ್ಯವನ್ನು ತಡೆಗಟ್ಟಲು ಇದು ಉತ್ತಮವಾಗಿರುತ್ತದೆ ಎಂದು ಸಂಪುಟ ಸಭೆ ನಂತರ ನಿನ್ನೆ ಸಂಸದೀಯ ವ್ಯವಹಾರಗಳ ಸಚಿವ ಟಿ.ಬಿ.ಜಯಚಂದ್ರ ಹೇಳಿದರು.