ಪುತ್ತೂರು ಪಟ್ಟೆಮಜಲಿನ ಬೀಡಿ ಕಟ್ಟುವ ಯುವತಿಯನ್ನು ಮೋಹನ, ತನ್ನ ಹೆಸರು ಆನಂದ್ ಎಂದು ಹೇಳಿ ಪರಿಚಯಿಸಿಕೊಂಡಿದ್ದ. ನಂತರ ಮೊಬೈಲ್ ನಂಬರ್ ಪಡೆದುಕೊಂಡು ಸಂಪರ್ಕ ಬೆಳೆಸಿದ್ದ. ಆಕೆಯನ್ನು ಪ್ರೀತಿಸುತ್ತಿದ್ದು ಮದುವೆಯಾಗುವುದಾಗಿ ನಂಬಿಸಿದ್ದ. ನಂತರ ಆಕೆಯನ್ನು ಸೆ. 17 2009ರಂದು ಪುತ್ತೂರಿನ ಬಸ್ ನಿಲ್ದಾಣಕ್ಕೆ ಒಡವೆ ಹಾಕಿಕೊಂಡು ಬಾ ಎಂದು ನಂಬಿಸಿ. ಇಬ್ಬರೂ ಮಡಿಕೇರಿಗೆ ಹೋಗಿ ಅಲ್ಲಿನ ವಸತಿ ನಿಲಯದಲ್ಲಿ ತಂಗಿದ್ದರು. ಯುವತಿಯೊಡನೆ ಲೈಂಗಿಕ ಸಂಪರ್ಕ ನಡೆಸಿ ಇದರಿಂದ ಗರ್ಭ ಧರಿಸುವ ಸಾಧ್ಯತೆ ಇದೆ ಹಾಗಾಗಿ ನಾನು ಕೊಡುವ ಗುಳಿಗೆ ತಿಂದರೆ ಗರ್ಭ ನಿಲ್ಲುವುದಿಲ್ಲ ಎಂದು ಸೈನೈಡ್ ನೀಡಿದ್ದ. ಅದನ್ನು ತಿಂದು ಯುವತಿ ಶೌಚಾಲಯದಲ್ಲಿ ಮೃತಪಟ್ಟ ಬಳಿಕ. ಆಕೆಯ ಬಳಿ ಇದ್ದ ಚಿನ್ನ, ಮೊಬೈಲ್ನೊಂದಿಗೆ ಮೋಹನ್ ಪರಾರಿಯಾಗಿದ್ದ.