ಐವರು ನಕ್ಸರು ಶರಣಾಗತಿ ಬಯಸಿದ್ದರು. ಆದರೆ ಸರ್ಕಾರ ಎಲ್ಲಾ ರೀತಿಯ ಸೌಲಭ್ಯ ನೀಡಬೇಕೆಂದು ಷರತ್ತು ವಿಧಿಸಲಾಗಿತ್ತು, ಆದರೆ ಕರ್ನಾಟಕ ಸರ್ಕಾರ ಈ ಷರತ್ತನ್ನು ನಿರಾಕರಿಸಿತ್ತು. ಇದರಿಂದಾಗಿ ನಕ್ಸಲರ ಗುಂಪೊಂದು ಗೌರಿ ಲಂಕೇಶ್ ವಿರುದ್ಧ ಆಕ್ರೋಶ ಗೊಂಡು ಸಭೆ ರದ್ದು ಪಡಿಸಿತ್ತು. ವಾಪಸ್ ಬಂದ ಗೌರಿ ಸಿಎಂ ಜೊತೆಗೆ ಚರ್ಚೆಗೆ ಸಮಯ ಕೋರಿದ್ದರು, ಆದರೆ ಅದಾದ ಕೆಲ ದಿನಗಳಲ್ಲಿ ಆಕೆಯ ಕೊಲೆಯಾಯಿತು ಎಂದು ಮೂಲಗಳು ತಿಳಿಸಿವೆ. ಮತ್ತೊಂದೆಡೆ ವಿಶೇಷ ತನಿಖಾ ತಂಡ ಮಾಜಿ ರೌಡಿ ಅಗ್ನಿ ಶ್ರೀಧರ್ ಅವರನ್ನು ಭೇಟಿ ಮಾಡಿ ವಿಚಾರಣೆ ನಡೆಸಿದ್ದಾರೆ.