ರಾಜ್ಯದಲ್ಲಿನ ಎರಡು ವಿಮಾನ ನಿಲ್ದಾಣಗಳ ಎರಡು ಮಾರ್ಗಗಳನ್ನು ಪ್ರಾದೇಶಿಕ ಸಂಪರ್ಕ ಯೋಜನೆ (ಆರ್ ಸಿ ಎಸ್) ಅಡಿಯಲ್ಲಿ ಪ್ರಾರಂಭಿಸಲಾಗಿದೆ. "ಆರ್ ಸಿ ಎಸ್ ಅಡಿಯಲ್ಲಿ, ಏರ್ ಲೈನ್ಸ್ ನಿರ್ವಾಹಕರ ಹರಾಜಿನಲ್ಲಿ ಮೊದಲ ಸುತ್ತಿನಲ್ಲಿ ನಾಲ್ಕು ವಿಮಾನ ನಿಲ್ದಾಣಗಳು - ಮೈಸೂರು, ಬೀದರ್, ಬೆಂಗಳೂರು ಮತ್ತು ಬಳ್ಳಾರಿಗಳನ್ನು ಆಯ್ಕೆ ಮಾಡಲಾಗಿದೆ. ಈ ವಿಮಾನ ನಿಲ್ದಾಣಗಳ ಅಭಿವೃದ್ಧಿಗಾಗಿ ಮತ್ತು ಏರ್ ಲೈನ್ಸ್ ಕಾರ್ಯಾಚರಣೆಗಳ ಪ್ರಾರಂಭಕ್ಕಾಗಿ, ನಮ್ಮ ಸರ್ಕಾರವು ಸಂಪೂರ್ಣ ಸಹಕಾರ ಮತ್ತು ಬೆಂಬಲವನ್ನು ಒದಗಿಸುತ್ತಿದೆ "ಎಂದು ದೇಶಪಾಂಡೆ ಹೇಳಿದರು.