ಕಾರಂತ್ ವಿರುದ್ಧ ವಿವಿಧ ಧರ್ಮದ ಜನರ ನಡುವೆ ದ್ವೇಷ ಬಿತ್ತುವಂತಹ ಭಾಷಣ ಮಾಡಿರುವುದು (ಐಪಿಸಿ ಸೆಕ್ಷನ್ 5050(1)ಸಿ ), ಕೋಮು ದ್ವೇಷ ಹಬ್ಬಿಸಲು ಯತ್ನಿಸಿರುವುದು, ಜನಾಂಗ, ಧರ್ಮ, ಜಾತಿ ಆಧಾರದಲ್ಲಿ ಜನರ ನಡುವೆ ದ್ವೇಷ ಬಿತ್ತಲು ಯತ್ನ (ಐಪಿಸಿ ಸೆಕ್ಷನ್ 505(2)), ಭಾಷಣ, ಸಂಜ್ಞೆ ಅಥವಾ ದೃಶ್ಯಾವಳಿಗಳ ಮೂಲಕ ಕೋಮುದ್ವೇಷ ಹಬ್ಬಿಸಲು ಯತ್ನಿಸಿರುವುದು (ಐಪಿಸಿ ಸೆಕ್ಷನ್ 153(ಎ)) ಮತ್ತು ಸರ್ಕಾರಿ ಅಧಿಕಾರಿ ಮೇಲೆ ಹಲ್ಲೆ ನಡೆಸಿ, ಗಾಯಗೊಳಿಸುವುದಾಗಿ ಬೆದರಿಕೆ ಹಾಕಿರುವ ಆರೋಪದ ಮೇಲೆ ಪುತ್ತೂರು ನಗರ ಠಾಣೆಯಲ್ಲಿ ಎಫ್ಐಆರ್ ದಾಖಲು ಮಾಡಲಾಗಿದೆ.