ಬಾಂಬ್ ನಾಗ ಮತ್ತು ಪುತ್ರರಿಗೆ ಹೈಕೋರ್ಟ್ ಷರತ್ತು ಬದ್ಧ ಜಾಮೀನು!

ಹವಾಲಾ ದಂಧೆ ಹಾಗೂ ದರೋಡೆ ಪ್ರಕರಣಗಳಲ್ಲಿ ಭಾಗಿಯಾದ ಆರೋಪದ ಮೇಲೆ ಬಂಧನಕ್ಕೀಡಾಗಿದ್ದ ಮಾಜಿ ಕಾರ್ಪೋರೇಟರ್ ಹಾಗೂ ರೌಡಿ ಶೀಟರ್ ನಾಗರಾಜು (ಬಾಂಬ್ ನಾಗ) ಮತ್ತು ಅವರ ಇಬ್ಬರು ಪುತ್ರರಿಗೆ ಕರ್ನಾಟಕ ಹೈಕೋರ್ಟ್ ಗುರುವಾರ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ.
ಮಾಜಿ ಕಾರ್ಪೋರೇಟರ್ ನಾಗರಾಜ್ (ಸಂಗ್ರಹ ಚಿತ್ರ)
ಮಾಜಿ ಕಾರ್ಪೋರೇಟರ್ ನಾಗರಾಜ್ (ಸಂಗ್ರಹ ಚಿತ್ರ)
Updated on
ಬೆಂಗಳೂರು: ಹವಾಲಾ ದಂಧೆ ಹಾಗೂ ದರೋಡೆ ಪ್ರಕರಣಗಳಲ್ಲಿ ಭಾಗಿಯಾದ ಆರೋಪದ ಮೇಲೆ ಬಂಧನಕ್ಕೀಡಾಗಿದ್ದ ಮಾಜಿ ಕಾರ್ಪೋರೇಟರ್ ಹಾಗೂ ರೌಡಿ ಶೀಟರ್ ನಾಗರಾಜು (ಬಾಂಬ್ ನಾಗ) ಮತ್ತು ಅವರ ಇಬ್ಬರು ಪುತ್ರರಿಗೆ  ಕರ್ನಾಟಕ ಹೈಕೋರ್ಟ್ ಗುರುವಾರ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ.
ಜೀವ ಬೆದರಿಕೆ, ಅಪಹರಣ, ಅಕ್ರಮ ಹಣ ಸಾಗಣೆ, ಹವಾಲಾ ದಂಧೆ ಸೇರಿದಂತೆ ಹಲವಾರು ಪ್ರಕರಣಗಳಲ್ಲಿ ಬಾಂಬ್ ನಾಗನ ವಿರುದ್ಧ ದೂರು ದಾಖಲಾಗಿತ್ತು. ಇದೇ ಕಾರಣಕ್ಕೆ ಶ್ರೀರಾಂಪುರದಲ್ಲಿರುವ ಬಾಂಬ್ ನಾಗನ ಕಚೇರಿ ಹಾಗೂ  ಮನೆಯ ಮೇಲೆ ಪೊಲೀಸರು ದಾಳಿ ನಡೆಸಿ ಅಪಾರ ಪ್ರಮಾಣದ ಬ್ಯಾನ್ ಆಗಿದ್ದ ನೋಟುಗಳನ್ನು ವಶಕ್ಕೆ ಪಡೆದಿದ್ದರು. ಬಳಿಕ ತಲೆಮರೆಸಿಕೊಂಡಿದ್ದ ನಾಗನನ್ನು ಪೊಲೀಸರು ಬಂಧಿಸಿದ್ದರು.

ಇದೀಗ ಎರಡು ಲಕ್ಷ ರೂ. ಬಾಂಡ್ ಹಾಗೂ ಇಬ್ಬರ ಶ್ಯೂರಿಟಿ ಮತ್ತು ಪ್ರತೀ ಗುರುವಾರ ತನಿಖಾಧಿಕಾರಿಗಳ ಮುಂದೆ ಹಾಜರಾಗಬೇಕು ಎಂಬ ಷರತ್ತಿನೊಂದಿಗೆ ಹೈ ಕೋರ್ಟ್ ಏಕಸದಸ್ಯ ಪೀಠ ನಾಗ ಮತ್ತು ಆತನ ಇಬ್ಬರು ಪುತ್ರರಾದ  ಶಾಸ್ತ್ರೀ ಮತ್ತು ಗಾಂಧಿಗೆ ಜಾಮೀನು ಮಂಜೂರು ಮಾಡಿದೆ.

ಮೂವರು ಉದ್ಯಮಿಗಳಿಗೆ ವಂಚಿಸಿದ ಆರೋಪ ಸೇರಿದಂತೆ ಇನ್ನಿತರ ಪ್ರಕರಣಗಳಿಗೆ ಸಂಬಂಧಿಸಿ ನಾಗರಾಜು, ಆತನ ಮಕ್ಕಳಾದ ಗಾಂಧೀ,ಶಾಸ್ತ್ರೀ, ಸಹಚರರಾದ ಜಯ ಕೃಷ್ಣ, ಸರವಣ್‌, ಸೌಂದರ್ಯರಾಜ್ ರನ್ನು ಪೊಲೀಸರು  ವಶಕ್ಕೆ ಪಡೆದಿದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X
Google Preferred source

Advertisement

X
Kannada Prabha
www.kannadaprabha.com