ಬೆಂಗಳೂರು: ಹತ್ತು ದಿನಗಳ ಹಿಂದೆ ಬೈಕ್ ನಲ್ಲಿ ಮನೆಯಿಂದ ಹೊರ ಹೋಗಿ ನಿಗೂಢವಾಗಿ ನಾಪತ್ತೆಯಾಗಿದ್ದ ಐಟಿ ಇಲಾಖೆ ಅಧಿಕಾರಿ ಪುತ್ರನ ಶವ ಇಂದು ಬೆಳಗ್ಗೆ ಪತ್ತೆಯಾಗಿದೆ. ಕೆಂಗೇರಿ ಸಮೀಪ ದೊಡ್ಡ ಆಲದ ಬಳಿಯಿರುವ ರಾಮೋಹಳ್ಳಿ ಕೆರೆಯಲ್ಲಿ ಪೊಲೀಸರಿಗೆ ಶರತ್ ನ ಮೃತದೇಹ ಸಿಕ್ಕಿದೆ. ಇಂದು ಬೆಳಗ್ಗೆ ಸ್ಥಳೀಯರು ಕೆರೆಯಲ್ಲಿ ಮೃತದೇಹ ಸಿಕ್ಕಿರುವುದು ನೋಡಿ ಪೊಲೀಸರಿಗೆ ಮಾಹಿತಿ ನೀಡಿದರು.