ಈ ಪ್ರಕರಣದಲ್ಲಿ ಇದುವರೆಗೂ ಯಾವುದೇ ಸಾಕ್ಷ್ಯಗಳು ಸಿಕ್ಕಿಲ್ಲ. ರಾಜ್ಯ ಸರ್ಕಾರ ನೇಮಿಸಿರುವ ವಿಶೇಷ ತನಿಖಾ ದಳ (ಎಸ್ಐಟಿ) ಕೂಡ ಯಾವುದೇ ಅಧಿಕೃತ ಹೇಳಿಕೆ ನೀಡಿಲ್ಲ. ಆದರೂ ಕೆಲ ರಾಜಕಾರಣಿಗಳು, ಪುರೋಗಾಮಿ ವಿಚಾರವಂತರು ಹಾಗೂ ಪತ್ರಕರ್ತರು ಹಿಂದುತ್ವನಿಷ್ಠ ಸಂಘಟನೆಗಳ ಹೆಸರನ್ನು ಆಗಾಗ್ಗೆ ಉಲ್ಲೇಖಿಸುತ್ತಿದ್ದಾರೆ. ನರೇಂದ್ರ ದಾಭೋಲ್ಕರ್, ಗೋವಿಂದ ಪಾನ್ಸರೆ ಹತ್ಯೆಗಳಿಗೂ ಗೌರಿ ಹತ್ಯೆಗೂ ಸಾಮ್ಯತೆ ಇದೆ ಎಂದು ಹೇಳುತ್ತಿದ್ದಾರೆ. ವಾಸ್ತವದಲ್ಲಿ, ಬೇರೆಯವರೂ ಇದೇ ಪದ್ಧತಿ ಅನುಸರಿಸಿ ಹತ್ಯೆ ಮಾಡಿರಬಹುದಲ್ಲವೇ’ ಎಂದು ಪ್ರಶ್ನಿಸಿದ್ದಾರೆ.